ಹೈಕೋರ್ಟ್ 
ರಾಜ್ಯ

ಪತ್ರಕರ್ತರ ಸಂಬಂಧಿಕರಿಗೆ ಕಿರುಕುಳ: ಪೊಲೀಸರಿಗೆ ಹೈ ಕೋರ್ಟ್ ತಪರಾಕಿ

ಶಾಸನ ಸಭೆಯಿಂದ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಪತ್ರಕರ್ತರಾದ ರವಿ ಬೆಳಗೆರೆ ಮತ್ತು ಅನಿಲಾ ರಾಜ್ ಅವರ ಸಂಬಂಧಿಕರಿಗೆ..

ಬೆಂಗಳೂರು: ಶಾಸನ ಸಭೆಯಿಂದ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಪತ್ರಕರ್ತರಾದ ರವಿ ಬೆಳಗೆರೆ ಮತ್ತು ಅನಿಲಾ ರಾಜ್ ಅವರ ಸಂಬಂಧಿಕರಿಗೆ ಪೊಲೀಸರು ಕಿರುಕುಳ  ನೀಡಿದ್ದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದೆ.
ಏನಾಗುತ್ತಿದೆ? ನಾವು ಪ್ರಜಾ ಪ್ರಭುತ್ವದಲ್ಲಿ ಜೀವಿಸುತ್ತಿದ್ದೇವೆಯೇ? ಪೊಲೀಸರ ನಡವಳಿಕೆಯಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಮೋಹನ್ ಕುಮಾರ್ ಅವರನ್ನು ಹಾಜರು ಪಡಿಸಲಿಲ್ಲ ಯಾಕೆ? ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುವ ಅವಶ್ಯಕತೆ ಏನಿತ್ತು? ಈ ರೀತಿಯ ಘಟನೆ ಸಂಭವಿಸಬಾರದು, ಯಾವುದೇ ಕಠಿಣ ನಿರ್ಧಾರ ತೆಗೆದುಕೊಳ್ಳಬಾರದು ಎಂದು ನ್ಯಾಯಮೂರ್ತಿ ಅಶೋಕ್ ಬಿ. ಹಿಂಚಗೇರಿ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪತ್ರಕರ್ತ ಅನಿಲ್ ರಾಜ್ ಅವರ ಹಿರಿಯ ಸಹೋದರನ ಅಳಿಯ ಮೋಹನ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂಬಆರೋಪ ಸಂಬಂಧ ನ್ಯಾಯಮೂರ್ತಿಗಳು ಕಿಡಿಕಾರಿದ್ದಾರೆ.
ಪತ್ರಕರ್ತರ ಸಂಬಂಧಿಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳಬಾರದು ಹಾಗೂ ಅವರಿಗೆ ಕಿರುಕುಳ ನೀಡದಂತೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್ ಪೊನ್ನಣ್ಣ ಅವರಿಗೆ ನ್ಯಾಯಮೂರ್ತಿಗಳು  ಸೂಚಿಸಿದ್ದಾರೆ.
ರವಿ ಬೆಳಗೆರೆ ಪುತ್ರ ಕರ್ಣ ಬೆಳಗೆರೆ ವಿರುದ್ಧ ಹುಬ್ಬಳ್ಳಿ ಪೊಲೀಸರು ಕ್ರಿಮಿನಲ್ ಕೇಸ್ ದಾಖಲಿಸಿ, ನಂತರ ಜಾಮೀನಿನ ಮೇಲೆ ಬಿಡುಡೆ ಮಾಡಲಾಗಿತ್ತು. ಪತ್ರಕರ್ತರ ಪರ ವಕೀಲರಾದ ಶಂಕರಪ್ಪ ಇದನ್ನು ಪ್ರಶ್ನಿಸಿದ್ದರು, 
ಹೈಕೋರ್ಟ್ ಅಸಮಾಧಾನ ಹೊರ ಹಾಕಿದ ನಂತರ, ಪೊಲೀಸರು ಮೋಹನ್ ಕುಮಾರ್ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನಂತರ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT