ಬಿಎಂಟಿಸಿ ಬಸ್ (ಸಂಗ್ರಹ ಚಿತ್ರ) 
ರಾಜ್ಯ

ಬಸ್ ಭಾಗ್ಯ ಬೇಕು: ಬೆಂಗಳೂರು ನಾಗರಿಕರ ವಿಶೇಷ ಅಭಿಯಾನ

ಬೆಂಗಳೂರು ನಾಗರಿಕರು ಹಾಗೂ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಬಸ್ ಭಾಗ್ಯ ಬೇಕು ಎಂಬ ಅಭಿಯಾನ ...

ಬೆಂಗಳೂರು: ಬೆಂಗಳೂರು ನಾಗರಿಕರು ಹಾಗೂ ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಬಸ್ ಭಾಗ್ಯ ಬೇಕು ಎಂಬ ಅಭಿಯಾನ ಆರಂಭಿಸಿದೆ.

ಬಿಎಂಟಿಸಿ ಮ್ಯಾನೇಜಿಂಗ್ ಡೈರೆಕ್ಟರ್  ಏಕರೂಪ್ ಕೌರ್ ಅವರನ್ನು ಭೇಟಿ ಮಾಡಿದ ಈ ತಂಡ ನಾಗರಿಕರ ಬೇಡಿಕೆಗಳನ್ನು ಈಡೇರಿಸಲು ಗಮನ ಹರಿಸುವಂತೆ ಮನವಿ ಮಾಡಿದೆ. ಬಜೆಟ್ ನಲ್ಲಿ ಬಿಎಂಟಿಸಿ ಬಸ್ ಗಳ ಸಂಖ್ಯೆಯನ್ನು ಹೆಚ್ಚಿಸಿ ಟಿಕೆಟ್ ದರವನ್ನು ಕಡಿಮೆ ಮಾಡುವಂತೆ ವೇದಿಕೆ ಮನವಿ ಮಾಡಿದೆ.

ಬಸ್ ಗಳ ಸಂಖ್ಯೆ ಏರಿಸುವಂತೆ ಮಾಡಿರುವ ಮನವಿಗೆ ಬಿಎಂಟಿಸಿ ಅಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ವಿಶೇಷವಾಗಿ ಕಾರ್ಮಿಕರು,  ಗಾರ್ಮೆಂಟ್ಸ್ ಕಾರ್ಖಾನೆ ನೌಕರರು, ನೈರ್ಮಲ್ಯ ಸಿಬ್ಬಂದಿ ಹಾಗೂ ದ್ವಾರ ಪಾಲಕರು, ಸೆಕ್ಯೂರಿಟಿ ಮತ್ತು ದಿನಗೂಲಿ ಕಾರ್ಮಿಕರಿಗೆ ಬಸ್ ಗಳ ಅವಶ್ಯಕತೆ ಇದೆ ಎಂದು ವೇದಿಕೆಯ ಸದಸ್ಯ ಶ್ರೀನಿವಾಸ್ ಆವಲಹಳ್ಳಿ ಎಂಬುವರು ತಿಳಿಸಿದ್ದಾರೆ.

ಬಿಎಂಟಿಸಿ ಬಸ್ ಗಳಿಗೆ ಸಬ್ಸಿಡಿ, ಖರ್ಚು ಮತ್ತು ವೆಚ್ಚಗಳು ಹಾಗೂ ತೆರಿಗೆ ಮತ್ತು ವೇತನಗಳಿಗಾಗಿ ಟಿಕೆಟ್ ದರ ಏರಿಕೆ ಮತ್ತು ಇಳಿಕೆ, ಬಸ್ ಗಳ ಸಂಖ್ಯೆ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಬಸ್ ಭಾಗ್ಯ ಬೇಕು ಕ್ಯಾಂಪೈನ್ ತಂಡ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದೆ.

ಯೂ ಟರ್ನ್ ಸಿನಿಮಾ ಖ್ಯಾತಿಯ ಶ್ರದ್ಧಾ ಶ್ರೀನಾಥ್, ರಾಕ್ ಬ್ಯಾಂಡ್ ಗಾಯಕ, ಬ್ರೂಸ್ ಲೀ ಮಾಣಿ, ಅಶ್ವಿನ್ ಶರ್ಮಾ, ಸೇರಿದಂತೆ ಹಲವು ಜನಪ್ರಿಯ ವ್ಯಕ್ತಿಗಳು ಈ ಬಸ್ ಭಾಗ್ಯ ಬೇಕು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 19 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ

2ನೇ ಟೆಸ್ಟ್ ಮೇಲೆ ಭಾರತ ಬಿಗಿ ಹಿಡಿತ: ಮಳೆಕಾಟದಿಂದ 4ನೇ ದಿನದಾಟ ಬೇಗನೇ ಅಂತ್ಯ