ಸಂಗ್ರಹ ಚಿತ್ರ 
ರಾಜ್ಯ

ನಾಗರಹೊಳೆ ವಿಷದ ಕಿಚ್ಚಿಗೆ 5 ಜಿಂಕೆಗಳು, 7 ಕಾಡು ಕುರಿಗಳು ಬಲಿ

ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಐದು ಜಿಂಕೆಗಳು ದಾರುಣವಾಗಿ ಮೃತಪಟ್ಟಿದ್ದು, ನೀರಿನಲ್ಲಿ ಬೆರಕೆಯಾಗಿರುವ ವಿಷವೇ ಜಿಂಕೆಗಳ ಸಾವಿಗೆ ಕಾರಣ ಎಂದು ಶಂಕಿಸಲಾಗುತ್ತಿದೆ...

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಐದು ಜಿಂಕೆಗಳು ದಾರುಣವಾಗಿ ಮೃತಪಟ್ಟಿದ್ದು, ನೀರಿನಲ್ಲಿ ಬೆರಕೆಯಾಗಿರುವ ವಿಷವೇ ಜಿಂಕೆಗಳ ಸಾವಿಗೆ ಕಾರಣ ಎಂದು ಶಂಕಿಸಲಾಗುತ್ತಿದೆ. 
ಹೆಚ್.ಡಿ.ಕೋಟೆ ತಾಲೂಕಿನ ಜಿ.ಎಂ. ಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಮೇಟಿಕುಪ್ಪ ಅರಣ್ಯ ವಲಯದಲ್ಲಿ 7 ಕಾಡು ಕುರಿ ಹಾಗೂ ಐದು ಜಿಂಕೆಗಳು ಸಾವನ್ನಪ್ಪಿವೆ. 
ಹೆಬ್ಬಳದಲ್ಲಿರುವ ಕೊಳದ ನೀರಿನ ಬಳಿ ಅರಣ್ಯ ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದ ವೇಳೆ ಕಾಡು ಕುರಿ ಮತ್ತು ಜಿಂಕೆ ಮರಿಗಳು ಮೃತಪಟ್ಟಿರುವುದನ್ನು ಗಮನಿಸಿದ್ದಾರೆ. ಕೂಡಲೇ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 
ಉದ್ಯಾನದಿಂದ ಕೆಲವೇ ದೂರದಲ್ಲಿ ಕೃಷಿ ಭೂಮಿಯಿದ್ದು, ಕೃಷಿ ಭೂಮಿಯಲ್ಲಿ ಪ್ರಾಣಿಗಳು ಕೆಲ ವಿಷ ಬೀಜಗಳನ್ನು ತಿಂದಿರಬೇಕು. ಗಂಟಲು ಒಣಿಗಿದ ಬಳಿಕ ನೀರು ಕಡಿಯಲು ಬಂದಾಗ ಪ್ರಾಣಿಗಳು ಮೃತಪಟ್ಟಿರಬಹುದು ಎಂದು ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ನಿರ್ದೇಶಕ ಎಸ್. ಮಣಿಕಾಂತನ್ ಅವರು ಹೇಳಿದ್ದಾರೆ. 
ಪ್ರಾಣಿಗಳ ಕೆಲ ಭಾಗಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಪ್ರಾಣಿಗಳ ಸಾವಿಗೆ ನಿಖರ ಕಾರಣಗಳು ತಿಳಿದುಬರಲಿದೆ ಎಂದು ತಿಳಿಸಿದ್ದಾರೆ. 
ಮೇಟಿಕುಪ್ಪದಲ್ಲಿ ಒಟ್ಟು 28 ನೀರಿನ ಕೊಳಗಳಿದ್ದು, ಇದರಲ್ಲಿ ಈಗಾಗಲೇ 22 ಕೊಳಗಳು ಬತ್ತು ಹೋಗಿವೆ. ಕೊಳಗಳಲ್ಲಿ ನೀರು ತುಂಬಿಸಲು ಅರಣ್ಯ ಇಲಾಖೆ ಸಾಕಷ್ಟು ಶ್ರಮಗಳನ್ನು ಪಡುತ್ತಿವೆ. ನೀರಿನ ಅಭಾವದಿಂದಾಗಿ ಜಿಂಕೆಗಳು ಕಾಡು ಕುರಿಗಳು ಹೊರಗೆ ಬರುವುದು ಸಾಮಾನ್ಯವಾಗಿರುತ್ತದೆ ಎಂದು ಮೂಲಗಳು ತಿಳಿಸಿವೆ. 
ಕಾಡು ಕುರಿ ಮತ್ತು ಜಿಲ್ಲೆಗಳ ಸಾವಿನ ಸಂಬಂಧ ಹೆಚ್.ಡಿ.ಕೋಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT