ಸಾಂದರ್ಭಿಕ ಚಿತ್ರ 
ರಾಜ್ಯ

ವಾಟ್ಸ್'ಆಪ್'ನಲ್ಲಿ ಅಶ್ಲೀಲ ವಿಡಿಯೋ ಬಯಲು: ಮಹಿಳೆ ಆತ್ಮಹತ್ಯೆಗೆ ಶರಣು

ವಾಟ್ಸ್'ಆಪ್'ನಲ್ಲಿ ತನ್ನ ಅಶ್ಲೀಲ ವಿಡಿಯೋವನ್ನು ಹರಿಯಬಿಟ್ಟ ವಿಚಾರ ತಿಳಿದು ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ...

ಮಂಡ್ಯ: ವಾಟ್ಸ್'ಆಪ್'ನಲ್ಲಿ ತನ್ನ ಅಶ್ಲೀಲ ವಿಡಿಯೋವನ್ನು ಹರಿಯಬಿಟ್ಟ ವಿಚಾರ ತಿಳಿದು ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆದಿದೆ. 
ಸೀತಾ (25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸೀತಾ ಆರು ವರ್ಷಗಳ ಹಿಂದೆ ಪ್ರೀತಿಸಿ ಮಂಜು ಎಂಬುವವರನ್ನು ಮದುವೆಯಾಗಿದ್ದರು. ದಂಪತಿಗಳಿಗೆ 5 ವರ್ಷದ ಮಗುವಿತ್ತು. 
ರೈಲ್ವೆ ಉದ್ಯೋಗಿಯಾಗಿದ್ದ ಮಂಡ್ಯ ತಾಲೂಕು ಹಳೇ ಬೂದನೂರಿನ ಅರ್ಜುನ್, ಸೀತಾ ಅವರ ಅಶ್ಲೀಲ ವಿಡಿಯೋ ತೆಗೆದಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಅದನ್ನು ಹರಿಬಿಟ್ಟದ್ದ. 
ಅರ್ಜುನ್ ಹಾಗೂ ಮಂಜು ಆಪ್ತ ಸ್ನೇಹಿತರಾಗಿದ್ದು, ಆಗಾಗ ಮಂಜು ಅವರ ಮನೆಗೆ ಬಂದು ಹೋಗುತ್ತಿದ್ದ. ಅಲ್ಲದೆ, ಕಳೆದ ಮೂರು ವರ್ಷಗಳಿಂದಲೂ ಸೀತಾ ಹಾಗೂ ಅರ್ಜುನ್ ನಡುವೆ ಅಕ್ರಮ ಸಂಬಂಧವಿತ್ತು ಎಂದು ಅರ್ಜುನ್ ಅವರ ಕುಟುಂಬ ಸದಸ್ಯರು ಹೇಳಿದ್ದಾರೆ. 
ಕೆಲ ತಿಂಗಳುಗಳಿಂದ ಸೀತಾ ಅರ್ಜುನ್ ನ್ನು ತಿರಸ್ಕರಿಸಲು ಆರಂಭಿಸಿದ್ದಳು. ಇದರಿಂದ ಕೆಂಡಾಮಂಡಲಗೊಂಡಿದ್ದ ಅರ್ಜುನ್ ಅಶ್ಲೀಲ ವಿಡಿಯೋವೊಂದನ್ನು ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಅಲ್ಲದೆ, ವಿಡಿಯೋವನ್ನು ವಾಟ್ಸ್ ಅಪ್ ನಲ್ಲಿ ಹರಿಬಿಟ್ಟಿದ್ದಾನೆ. ಈ ವಿಚಾರ ತಿಳಿದ ಸೀತಾ ತೀವ್ರ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಆಕೆ ಡೆತ್ ನೋಟ್ ನ್ನು ಬರೆದಿಟ್ಟಿದ್ದು, ತನ್ನ ಸಾವಿಗೆ ಅರ್ಜುನ್ ಕಾರಣ ಎಂದು ಹೇಳಿಕೊಂಡಿದ್ದಾಳೆ. 
ಪ್ರಸ್ತುತ ಆರೋಪಿ ಅರ್ಜುನ್ ತಲೆಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಮದ್ದೂರು ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT