ಸಂಗ್ರಹ ಚಿತ್ರ 
ರಾಜ್ಯ

ಶಿರಡಿ ಘಾಟ್ ರಸ್ತೆಯ ಶೋಚನೀಯ ಸ್ಥಿತಿ; ಪ್ರಯಾಣಿಕರ ಗೋಳು ಕೇಳೋರಿಲ್ಲ!

ಸರ್ಕಾರ ಎಷ್ಟೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೂ, ಈಗಲೂ ಶಿರಡಿ ಘಾಟ್ ರಸ್ತೆಯಲ್ಲಿ ಪ್ರಯಾಣಿಕರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ...

ಮಂಗಳೂರು: ಸರ್ಕಾರ ಎಷ್ಟೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೂ, ಈಗಲೂ ಶಿರಡಿ ಘಾಟ್ ರಸ್ತೆಯಲ್ಲಿ ಪ್ರಯಾಣಿಕರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. 
ರಸ್ತೆಗಳಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದಂತೆಯೇ ಧೂಳು ಮೇಲೇಳುತ್ತಿದೆ. ಇದರಿಂದ ಪ್ರಯಾಣಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. 
ರಸ್ತೆ ಯಾವಾಗ ಸರಿಹೋಗುತ್ತದೆ? ಟೀ ಕುಡಿಯಲು ಬರುವ ಪ್ರತೀಯೊಬ್ಬ ಚಾಲಕರು ಈ ಪ್ರಶ್ನೆಯನ್ನು ಕೇಳುತ್ತಾರೆ. ಕೆಲವರು ಉತ್ತರವನ್ನು ಕೇಳಿಸಿಕೊಳ್ಳದೆಯೇ ಹೊರಟು ಹೋಗುತ್ತಾರೆ. ಇನ್ನು ಕೆಲವರು ಟೀ ಕುಡಿದು ಬೇಸರ ವ್ಯಕ್ತಪಡಿಸಿ ಹೋಗುತ್ತಾರೆಂದು ರಾಷ್ಟ್ರೀಯ ಹೆದ್ದಾರಿ ಗುಂಡ್ಯಾ ಗೇಟ್ ಬಳಿ ಟೀ ವ್ಯಾಪಾರ ಮಾಡುವ ವ್ಯಕ್ತಿಯೊಬ್ಬರು ಹೇಳಿದ್ದಾರೆ. 
2015ರಲ್ಲಿ ಶಿರಡಿ ಘಾಟ್ ರಸ್ತೆಯ ಕಾಮಗಾರಿಗೆ ವರ್ಕ್ ಆರ್ಡರ್ ಆಗಿತ್ತು. ಕೆಂಪ್ಹೊಳೆಯಿಂದ ಗುಂಡ್ಯಾ ಗೇಟ್ ವರೆಗೂ 30 ಕಿ.ಮೀ ರಸ್ತೆಗಳಲ್ಲಿ ಎರಡನೇ ಹಂತದಲ್ಲಿ ಕಾಂಕ್ರೀಟ್ ಹಾಕಬೇಕಾಗಿತ್ತು. ಶಿರಡಿ ಘಾಟ್ ರಸ್ತೆಯ 2ನೇ ಹಂತದ ಕಾಮಗಾರಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ರಸ್ತೆಗಳಿಗೆ ಕಾಂಕ್ರೀಟ್ ಹಾಕುವ ಕೆಲಸವೂ ಕೂಡ ಹಾಳಾಗಿದೆ ಎಂದು ಟೀ ವ್ಯಾಪಾರಿ ಗಿರೀಶ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT