ಕೊಟ್ಟೂರೇಶ್ವರ ಜಾತ್ರೆಯ ರಥ 
ರಾಜ್ಯ

ಬಳ್ಳಾರಿ ಕೊಟ್ಟೂರೇಶ್ವರ ಜಾತ್ರೆ ದುರಂತ: ರಥ ಬೀಳುವುದಕ್ಕೂ ಮುನ್ನ ನಡೆದಿತ್ತು ಪವಾಡ

ಕಳೆದು ತಿಂಗಳು ಬಳ್ಳಾರಿ ಜಿಲ್ಲೆಯ ಕೊಟ್ಟೂರೇಶ್ವರ ಜಾತ್ರೆಯಲ್ಲಿ ದೇವರ ರಥ ಬಿದ್ದು ಭಕ್ತರನ್ನು ಆತಂಕಕ್ಕೀಡು ಮಾಡಿತ್ತು. ಆದ್ರೆ ರಥ ಬೀಳುವ ಮೊದಲೇ ಅದರ ಬಗ್ಗೆ ಸೂಚನೆ ...

ಬಳ್ಳಾರಿ: ಕಳೆದು ತಿಂಗಳು ಬಳ್ಳಾರಿ ಜಿಲ್ಲೆಯ ಕೊಟ್ಟೂರೇಶ್ವರ ಜಾತ್ರೆಯಲ್ಲಿ ದೇವರ ರಥ ಬಿದ್ದು ಭಕ್ತರನ್ನು ಆತಂಕಕ್ಕೀಡು ಮಾಡಿತ್ತು. ಆದ್ರೆ ರಥ ಬೀಳುವ ಮೊದಲೇ ಅದರ ಬಗ್ಗೆ ಸೂಚನೆ ಸಿಕ್ಕಿತ್ತು ಎಂದು ಹೇಳಲಾಗುತ್ತಿದೆ.

ರಥ ಬೀಳುವ ಮೂರು ನಿಮಿಷಗಳ ಮೊದಲು ದೇವಸ್ಥಾನಕ್ಕೆ ಸೇರಿದ್ದ ಗೂಳಿಯೊಂದು ಜನರಿದ್ದ ಗುಂಪಿಗೆ ನುಗ್ಗಿ ಭಕ್ತರನ್ನ ಓಡಿಸಿದೆ. ಆಶ್ಚರ್ಯ ಅಂದ್ರೆ ರಥ ಬೀಳುವ ಜಾಗದಲ್ಲಿದ್ದ ಭಕ್ತರನ್ನೇ ಚದುರಿಸಿದ್ದು, ಯಾರಿಗೂ ಹೆಚ್ಚಿನ ಪ್ರಮಾಣದಲ್ಲಿ ಗಾಯವಾಗಿಲ್ಲ. ಬಸವಣ್ಣನ ಎಚ್ಚರಿಕೆಯಿಂದಲೇ 60 ಅಡಿ ರಥ ನೆಲಕ್ಕೆ ಉರುಳಿದ್ರೂ ಯಾವುದೇ ಸಾವು ಸಂಭವಿಸಿಲ್ಲ,  ಇದು ಪವಾಡವೋ, ಕಾಕತಾಳಿಯವೋ, ದೇವರ ಕೃಪೆಯೋ ಅಥವಾ ದೇವರ ರೂಪದಲ್ಲಿ ಬಸವನೇ ಬಂದು ಭಕ್ತರನ್ನು ಕಾಪಾಡಿದನೋ. ಒಟ್ಟಿನಲ್ಲಿ ಆಗಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಲು ಈ ಬಸವ ಕಾರಣವಾಗಿರುವುದಕ್ಕೆ ಕೊಟ್ಟೂರಿನಲ್ಲೀಗ ಬಸವನ ಆರಾಧನೆ ನಡೆಯುತ್ತಿದೆ. ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಕಳೆದ ಫೆಬ್ರವರಿ 22ರಂದು ಜಿಲ್ಲೆಯ ಕೂಡ್ಲಗಿ ತಾಲೂಕಿನ ಕೊಟ್ಟೂರು ಗುರುಬಸವೇಶ್ವರ ರಥೋತ್ಸವದ ವೇಳೆಯಲ್ಲಿ ಚಕ್ರದ ಅಚ್ಚು ಮುರಿದು ರಥ ಮಗುಚಿ ಬಿದ್ದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!