ಸಾಂದರ್ಭಿಕ ಚಿತ್ರ 
ರಾಜ್ಯ

ಐಆರ್ ಸಿಟಿಸಿಯಿಂದ ರೈಲು ನಿಲ್ದಾಣಗಳಲ್ಲಿ ಬೇಸ್ ಕಿಚನ್ ಸ್ಥಾಪನೆಗೆ ನಿರ್ಧಾರ

ರೈಲುಗಳಲ್ಲಿ ನೀಡುವ ಆಹಾರದ ಗುಣಮಟ್ಟ ಕಳಪೆಯಾಗುತ್ತಿದೆ ಎಂದು ಪ್ರಯಾಣಿಕರ ದೂರನ್ನು ಗಣನೆಗೆ...

ಬೆಂಗಳೂರು: ರೈಲುಗಳಲ್ಲಿ ಮತ್ತು ರೈಲು ನಿಲ್ದಾಣಗಳಲ್ಲಿ ನೀಡುವ ಆಹಾರದ ಗುಣಮಟ್ಟ ಕಳಪೆಯಾಗಿದೆ ಎಂದು ಪ್ರಯಾಣಿಕರ ದೂರನ್ನು ಗಣನೆಗೆ ತೆಗೆದುಕೊಂಡಿರುವ ರೈಲ್ವೆ ಮಂಡಳಿ, ರೈಲಿನ ಕ್ಯಾಟರಿಂಗ್ ಕಾರ್ಯನಿರ್ವಹಣೆಯನ್ನು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮಕ್ಕೆ(ಐಆರ್ ಸಿಟಿಸಿ) ಹಸ್ತಾಂತರಿಸಲು ನಿರ್ಧರಿಸಿದೆ. ಏಳು ವರ್ಷಗಳ ನಂತರ ನಿಗಮ ತನ್ನ ಈ ಕಾರ್ಯವನ್ನು ಮತ್ತೆ ತೆಗೆದುಕೊಳ್ಳಲಿದೆ.
ಈ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ಐಆರ್ ಸಿಟಿಸಿಯ ಹಿರಿಯ ಅಧಿಕಾರಿಗಳು, ನಿಗಮದ ಈ ನಡೆಯಿಂದ ಆಹಾರದ ಗುಣಮಟ್ಟ ಹೆಚ್ಚಲಿದೆ. ಫೆಬ್ರವರಿ 27ರಂದು ರೈಲ್ವೆ ಇಲಾಖೆ ಹೊರಡಿಸಿರುವ ಯೋಜನೆ ಪ್ರಕಾರ, ರೈಲುಗಳಲ್ಲಿ ನೀಡುವ ಆಹಾರ ತಾಜಾ ಮತ್ತು ಬಿಸಿಯಾಗಿರಬೇಕೆಂದು ನಿಗಮಕ್ಕೆ ರೈಲ್ವೆ ನಿಲ್ದಾಣಗಳಲ್ಲಿ ಅಡಿಗೆ ಮನೆಗಳನ್ನು(ಬೇಸ್ ಕಿಚನ್) ಸ್ಥಾಪಿಸುವಂತೆ ಸೂಚಿಸಲಾಗಿತ್ತು ಎಂದು  ಹೇಳಿದ್ದಾರೆ.
ಇನ್ನೊಂದು ತಿಂಗಳೊಳಗೆ ನಮ್ಮ ವ್ಯಾಪಾರದ ಮಾದರಿಯನ್ನು ಸಲ್ಲಿಸುತ್ತೇವೆ. ಮೂಲ ಅಡಿಗೆಮನೆ ಯಾವ್ಯಾವ ನಿಲ್ದಾಣಗಳಲ್ಲಿ ಸ್ಥಾಪಿಸಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರದ ಹಂತದಲ್ಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ನೀಡಲು ಉನ್ನತ ಮಟ್ಟದ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗಿದೆ.
ಯೋಜನೆ ಪ್ರಕಾರ, ಬೇಸ್ ಕಿಚನ್ ಇನ್ನು 6 ತಿಂಗಳೊಳಗೆ ಸ್ಥಾಪಿಸಬೇಕು. ರೈಲು ನಿಲ್ದಾಣದ ಒಳಗೆ ಜಾಗವನ್ನು ನೀಡಬೇಕೆಂದಿರುವುದರಿಂದ ಇದಕ್ಕೆ ಸಾಕಷ್ಟು ಸಮಯ ಬೇಕಾಗುತ್ತದೆ. ಅಡಿಗೆಮನೆಯಲ್ಲಿ ಅಗತ್ಯಪಟ್ಟ ಮೂಲಸೌಕರ್ಯಗಳನ್ನು ನಿರ್ಮಿಸಬೇಕಾಗುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಆದರೆ ರೈಲ್ವೆ ನಿಗಮದ ಈ ನಡೆ ಪ್ರಯಾಣಿಕರಿಗೆ ಮುಂದಿನ ದಿನಗಳಲ್ಲಿ ಯಾವ ರೀತಿ ಅನುಕೂಲವಾಗುತ್ತದೆ ಎಂಬುದು ಸದ್ಯದ ಪ್ರಶ್ನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!