ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮ್ಯಾನ್ ಹೋಲ್ ಸ್ವಚ್ಛಗೊಳಿಸುತ್ತಿದ್ದ ಮೂವರು ಕಾರ್ಮಿಕರ ದಾರುಣ ಸಾವು

ಸಿ.ವಿ.ರಾಮನ್‌ನಗರದ ಕಗ್ಗದಾಸಪುರ ಮುಖ್ಯರಸ್ತೆಯಲ್ಲಿರುವ ಮ್ಯಾನ್‌ಹೋಲ್‌ಗೆ ಸೋಮವಾರ ರಾತ್ರಿ ದುರಸ್ಥಿಗಾಗಿ ಇಳಿದಿದ್ದ ಮೂವರು ಕಾರ್ಮಿಕರು ..

ಬೆಂಗಳೂರು: ಸಿ.ವಿ.ರಾಮನ್‌ನಗರದ ಕಗ್ಗದಾಸಪುರ ಮುಖ್ಯರಸ್ತೆಯಲ್ಲಿರುವ ಮ್ಯಾನ್‌ಹೋಲ್‌ಗೆ ಸೋಮವಾರ ರಾತ್ರಿ ದುರಸ್ಥಿಗಾಗಿ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಮ್ಯಾನ್‌ಹೋಲ್‌ನಲ್ಲಿ ಬಿದ್ದು ಮೃತಪಟ್ಟವರು ಮೂವರು ಆಂಧ್ರ ಮೂಲದವರು ಎಂದು ತಿಳಿದು ಬಂದಿದೆ. ಕೆಲವು ತಿಂಗಳ ಹಿಂದೆ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದರು. ಮೃತರನ್ನು ವೀರಯ್ಯ, ಆಂಜನೇಯ ರೆಡ್ಡಿ, ತಾವತ್ತಿನಾಯ್ಡು ಎಂದು ಗುರುತಿಸಲಾಗಿದೆ.

ನೀರಿನ ಸೋರಿಕೆ ತಡೆಯಲು ರಾತ್ರಿ 11 ಗಂಟೆ ನಂತರ ಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿದಿದ್ದರು. 12.30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್‌ನಲ್ಲಿ ಬಂದಿದ್ದ ಕಾರ್ಮಿಕರ ಪೈಕಿ ಇಬ್ಬರು ಮ್ಯಾನ್‌ಹೋಲ್‌ಗೆ ಇಳಿದು ದುರಸ್ಥಿ ಕಾರ್ಯದಲ್ಲಿ ತೊಡಗಿದ್ದರು, ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಮೇಲೆ ಎತ್ತುವಂತೆ ಕೂಗಿದ್ದರು. ಇವರ ಚೀರಾಟ ಕೇಳಿ ಟ್ರ್ಯಾಕ್ಟರ್‌ ಚಾಲಕ ಸಹ ಮ್ಯಾನ್‌ಹೋಲ್‌ಗೆ ಇಳಿದಿದ್ದ. ಮೂವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಗುತ್ತಿಗೆದಾರ ಯಾವುದೇ ಭದ್ರತಾ ಕ್ರಮಗಳನ್ನು ಕೈಗೊಳ್ಳದೇ ಕಾರ್ಮಿಕರನ್ನು ಮ್ಯಾನ್ ಹೋಲ್‌ ಒಳಗೆ ಇಳಿಸಿದ್ದಾರೆ. ಗುತ್ತಿಗೆದಾರನ ನಿಲರ್ಕ್ಷ್ಯದಿಂದ ಪ್ರಾಣಹಾನಿ ಸಂಭವಿಸಿದೆ ಎಂದು ಮೃತ ಕಾರ್ಮಿಕರ ಕುಟುಂಬದವರು ಆರೋಪಿಸಿದ್ದಾರೆ.

ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT