ಗೌರವ ಸಲ್ಲಿಸಲು ಯಡ್ಯೂರಪ್ಪ ಕಾಲಿಗೆ ಬೀಳುತ್ತಿರುವ ಕಾರ್ಯಕರ್ತರು: ವಿಡಿಯೋ ವೈರಲ್ 
ರಾಜ್ಯ

ಗೌರವ ಸಲ್ಲಿಸಲು ಯಡ್ಯೂರಪ್ಪ ಕಾಲಿಗೆ ಬೀಳುತ್ತಿರುವ ಕಾರ್ಯಕರ್ತರು: ವಿಡಿಯೋ ವೈರಲ್

ಸಂಸ್ಕೃತಿ, ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಬಿಜೆಪಿಯಲ್ಲಿ ತಮಿಳುನಾಡು ರಾಜಕಾರಣದ ಮಾದರಿಯ ಶಿಸ್ತು ಬೆಳೆಯುತ್ತಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ರಾಜ್ಯ ಬಿಜೆಪಿಯ ಅಧ್ಯಕ್ಷ, ಮಾಜಿ ಸಿಎಂ ಯಡಿಯೂರಪ್ಪ ಅವರ

ಬೆಂಗಳೂರು: ಸಂಸ್ಕೃತಿ, ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಬಿಜೆಪಿಯಲ್ಲಿ ತಮಿಳುನಾಡು ರಾಜಕಾರಣದ ಮಾದರಿಯ ಶಿಸ್ತು ಬೆಳೆಯುತ್ತಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ರಾಜ್ಯ ಬಿಜೆಪಿಯ ಅಧ್ಯಕ್ಷ, ಪ್ರಭಾವಿ ನಾಯಕ, ಮಾಜಿ ಸಿಎಂ ಯಡಿಯೂರಪ್ಪ ಅವರ ನಡೆ ಇಂತಹ ಪ್ರಶ್ನೆ ಎದುರಾಗಲು ಕಾರಣವಾಗಿದೆ. 
ರಾಜಕಾರಣಿಗಳು, ಪ್ರಮುಖವಾಗಿ ಅಧಿಕಾರದಲ್ಲಿರುವ ರಾಜಕಾರಣಿಗಳ ಸೋಮಾರಿತನ, ದುರಹಂಕಾರ, ದರ್ಪ ಅಂಗರಕ್ಷಕರಿಂದ, ಪೊಲೀಸ್ ಪೇದೆಗಳಿಂದ ಶೂ ಲೇಸ್ ಕಟ್ಟಿಸಿಕೊಳ್ಳುವ ರೀತಿಯ ಪ್ರಕರಣಗಳಿಗೆ ಸೀಮಿತವಾಗಿತ್ತು ಎಂದುಕೊಂಡಿದ್ದೆವು ಆದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಇದನ್ನೂ ಮೀರಿಸುವಂತಹ ಪ್ರಕರಣವನ್ನು ಬಯಲು ಮಾಡಿದ್ದು, ಬಿಜೆಪಿಯ ಕಾರ್ಯಕರ್ತರು ಗೌರವ ಸಲ್ಲಿಸಲು ಯಡಿಯೂರಪ್ಪನವರ ಕಾಲಿಗೆ ಎರಗುತ್ತಿರುವುದು ದೃಶ್ಯಾವಳಿಯಲ್ಲಿ ಸೆರೆಯಾಗಿದೆ. 
ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಒಂದಷ್ಟು ಜನ ಕಾರ್ಯಕರ್ತರು ಯಡಿಯೂರಪ್ಪನವರ ಕಾಲು ಮುಟ್ಟಿ ನಮಸ್ಕರಿಸುತ್ತಿರುವುದು ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಪಕ್ಷದ ಶಾಸಕರು, ಕಾರ್ಯಕರ್ತರು ನಮಸ್ಕರಿಸುತ್ತಿದ್ದ ರೀತಿ ಹಾಗೂ ಎಐಎಡಿಎಂಕೆ ಪಕ್ಷದಲ್ಲಿದ್ದ ಸಂಸ್ಕೃತಿಯನ್ನೇ ನೆನಪಿಸುತ್ತಿದೆ. ಸಂಸ್ಕೃತಿ, ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಬಿಜೆಪಿಯಲ್ಲಿ ಇಂತಹ ಬೆಳವಣಿಗೆ ನಡೆದಿರುವುದು ಅಚ್ಚರಿ ಮೂಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT