ಸಂಗ್ರಹ ಚಿತ್ರ 
ರಾಜ್ಯ

ಮಾರ್ಚ್ 14ರವರೆಗೂ ಎಟಿಎಂ ದಾಳಿಕೋರ ಪೊಲೀಸರ ವಶಕ್ಕೆ!

ನಗರದ ಎನ್ ಆರ್ ವೃತ್ತದಲ್ಲಿರುವ ಕಾರ್ಪೊರೇಷನ್‌ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಭೀಕರ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಮಧುಕರ್ ರೆಡ್ಡಿ ಅಲಿಯಾಸ್ ಮದನ್ ರೆಡ್ಡಿಯನ್ನು ಬೆಂಗಳೂರು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ನಗರದ ಎನ್ ಆರ್ ವೃತ್ತದಲ್ಲಿರುವ ಕಾರ್ಪೊರೇಷನ್‌ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಭೀಕರ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಮಧುಕರ್ ರೆಡ್ಡಿ ಅಲಿಯಾಸ್ ಮದನ್ ರೆಡ್ಡಿಯನ್ನು  ಬೆಂಗಳೂರು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಆಂಧ್ರಪ್ರದೇಶದ ಕಡಪ ಜೈಲಿನಲ್ಲಿದ್ದ ಆರೋಪಿಯನ್ನು ಮಂಗಳವಾರ ಬಾಡಿ ವಾರಂಟ್‌ ಆಧಾರದ ಮೇಲೆ ವಶಕ್ಕೆ ಪಡೆದ ಬೆಂಗಳೂರು ಪೊಲೀಸರು ಬಳಿಕ ಆತನನ್ನು 6ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ  ವೇಳೆ ನ್ಯಾಯಾಧೀಶರಾದ ಎ ರಾಘವೇಂದ್ರ ಅವರು ಮಾರ್ಚ್ 14ರವರೆಗೂ ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಹಲಸೂರು ಗೇಟ್ ಪೊಲೀಸ್ ಠಾಣೆಯ ಉಪಾಯುಕ್ತ ತಮ್ಮಯ್ಯ ಅವರು ಪ್ರಕರಣದ ಮೇಲುಸ್ತುವಾರಿ ನೋಡಕೊಳ್ಳಲ್ಲಿದ್ದು, ಇವರ ನೇತೃತ್ವದಲ್ಲೇ ಸಂತ್ರಸ್ತೆ ಜ್ಯೋತಿ ಉದಯ್ ಅವರು ಆರೋಪಿಯ ಗುರುತು ಪತ್ತೆ  ಮಾಡಲಿದ್ದಾರೆ.

ಕಳೆದ ಜನವರಿ 31ರ ರಾತ್ರಿ ಆಂಧ್ರಪ್ರದೇಶದ ನಲ್ಲಪಲ್ಲಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಮಧುಕರ್‌ ರೆಡ್ಡಿಯನ್ನು ಅಲ್ಲಿಯ ಪೊಲೀಸರು ಬಂಧಿಸಿದ್ದರು. ಆತನೇ ಬೆಂಗಳೂರಿನ ಎಟಿಎಂನಲ್ಲಿ ಜ್ಯೋತಿ ಅವರ ಮೇಲೆ ಹಲ್ಲೆ  ಮಾಡಿದ್ದ ಆರೋಪಿ ಎಂಬುದು ಬಳಿಕ ಗೊತ್ತಾಗಿತ್ತು.ಜತೆಗೆ ಆತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ವಶಕ್ಕೆ ಪಡೆದ ಪೊಲೀಸರು ಇದೀಗ ಆರೋಪಿಯನ್ನು ಬೆಂಗಳೂರು ಪೊಲೀಸರ  ವಶಕ್ಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT