ಸಾಂದರ್ಭಿಕ ಚಿತ್ರ 
ರಾಜ್ಯ

ಕಡಿಮೆ ಹಾಜರಾತಿ: ರಾಜ್ಯದ 4 ಸಾವಿರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ನಿಷೇಧ

ಪದೇ ಪದೇ ತರಗತಿಗೆ ಚಕ್ಕರ್ ಹಾಕುವ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಕೆ ಶಾಕ್ ನೀಡಿದೆ. ಕಡಿಮೆ ಹಾಜರಾತಿಯ ಕಾರಣ ಮಾರ್ಚ್ 9 ರಿಂದ ...

ಬೆಂಗಳೂರು: ಪದೇ ಪದೇ ತರಗತಿಗೆ ಚಕ್ಕರ್ ಹಾಕುವ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಕೆ ಶಾಕ್ ನೀಡಿದೆ. ಕಡಿಮೆ ಹಾಜರಾತಿಯ ಕಾರಣ ಮಾರ್ಚ್ 9 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 4,204 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿಷೇಧ ಹೇರಲಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೇ ಈ ವರ್ಷ ಕಾಲೇಜಿಗೆ ಗೈರು ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಡಿಮೆ ಹಾಜರಾತಿಯ ಕಾರಣ ಮಾರ್ಚ್/ ಏಪ್ರಿಲ್ 2016 ರ ಪರೀಕ್ಷೆಗೆ 1,000 ವಿದ್ಯಾರ್ಥಿಗಳು ಹಾಜರಾಗಲು ಅನರ್ಹರಾಗಿದ್ದರು. 2015 ರಲ್ಲಿ 2,050 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಿಂದ ಹೊರಗುಳಿದ್ದಿದರು.

2006ರ ಕರ್ನಾಟಕ ಶಿಕ್ಷಣ ಕಾಯಿದೆಯ 21 ನೇ ನಿಯಮದ ಪ್ರಕಾರ ವಿದ್ಯಾರ್ಥಿ ಅಂತಿಮ ಪರೀಕ್ಷೆಗೆ ಕೂರಲು ಶೇ.75 ರಷ್ಟು ಹಾಜರಾತಿ ಕಡ್ಡಾಯವಾಗಿದೆ. ಇದೇ ನಿಯಮ ಪ್ರಥಮ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ.

ಹಾಜರಾತಿ ಕಡಿಮೆ ಇದ್ದರೂ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಪ್ರವೇಶ ಪತ್ರ ನೀಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅಡ್ಮಿಶನ್ ಟಿಕೆಟ್ ನೀಡುವುದನ್ನು ಇಲಾಖೆ  ಸ್ಥಗಿತಗೊಳಿಸಿತು. 2013 ಮುಂಚೆ ಕಡಿಮೆ ಹಾಜರಾತಿ ಇದ್ದರೂ ಪರೀಕ್ಷೆಗೆ ಬರೆಯಬಹುದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ಮುಂದುವರಿಕೆ..!

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು, ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: ಕೈ ಪಾಳಯದಲ್ಲಿ ಶುರುವಾಯ್ತಾ ಹೊಸ ಆಂತರಿಕ ತಂತ್ರಗಾರಿಕೆ..?

ರಾಜ್ಯದ 32,611 ಕೋಟಿ ರೂ. ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌: ಮಂಗಳೂರು ಸಂಪುಟ ಸಭೆಯಲ್ಲಿ ಸರ್ಕಾರ ಮಹತ್ವದ ಘೋಷಣೆ..!

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ. ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ, ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!