ಪೋಷಕರ ಆಕ್ರಂಧನ 
ರಾಜ್ಯ

ವಿಷಾಹಾರದ ಹಿಂದೆ ಕಾಣದ ಕೈಗಳ ಸಂಚು: ಮಾಜಿ ಶಾಸಕ ಕಿರಣ್ ಕುಮಾರ್ ಆರೋಪ!

ತುಮಕೂರು ವಸತಿ ಶಾಲೆಯಲ್ಲಿ ವಿಷಾಹಾರ ತಿಂದು ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಸತಿ ಶಾಲೆಯ ಮಾಲೀಕ ಹಾಗೂ ಮಾಜಿ ಶಾಸಕ ಕಿರಣ್ ಕುಮಾರ್ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಸಂಚು ಅಡಗಿರಬಹುದು ಎಂದು ಶಂಕಿಸಿದ್ದಾರೆ.

ತುಮಕೂರು: ತುಮಕೂರು ವಸತಿ ಶಾಲೆಯಲ್ಲಿ ವಿಷಾಹಾರ ತಿಂದು ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಸತಿ ಶಾಲೆಯ ಮಾಲೀಕ ಹಾಗೂ ಮಾಜಿ ಶಾಸಕ ಕಿರಣ್ ಕುಮಾರ್  ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಸಂಚು ಅಡಗಿರಬಹುದು ಎಂದು ಶಂಕಿಸಿದ್ದಾರೆ.

ಘಟನೆ ಬಗ್ಗೆ ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್ ಅವರು ಗುರುವಾರ ಹೇಳಿಕೆ ನೀಡಿದ್ದು, "ಮಕ್ಕಳ ತಿನ್ನುವ ಊಟದಲ್ಲಿ ನೀಲಿ ಬಣ್ಣ ಕಾಣಿಸಿಕೊಂಡಿತ್ತು, ಹೀಗಾಗಿ ಊಟದಲ್ಲಿ ಯಾರೋ ಔಷಧ ಬೆರೆಸಿರುವ ಸಾಧ್ಯತೆ ಇದೆ ಎಂದು  ಶಂಕಿಸಿದ್ದಾರೆ. "ಪ್ರಕರಣ ಸಂಬಂಧ ಸಿಬ್ಬಂದಿಗಳನ್ನು ವಿಚಾರಿಸಿದಾಗ ಮೂವರು ಮಕ್ಕಳು ಚಪಾತಿ ಪಲ್ಯಾ ಬದಲಿಗೆ ಅನ್ನ ಸಾಂಬರ್ ತಿಂದಿದ್ದಾರೆ. ಆಗ ಸಾಂಬರ್ ನಲ್ಲಿ ವ್ಯತ್ಯಾಸ ಇದ್ದಿದ್ದು ಕಂಡು ಬಂತು. ಕೂಡಲೇ ಅಸ್ವಸ್ಥ ಮಕ್ಕಳನ್ನು  ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಂತರ ಅಲ್ಲಿದ್ದ ಉಳಿದ ಮಕ್ಕಳು ಯಾರು ಊಟ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

"ಹಾಸ್ಟೆಲ್‍ನಲ್ಲಿ 40 ಮಂದಿ ವಿದ್ಯಾರ್ಥಿಗಳಿದ್ದು, 3ನೇ ತರಗತಿಯಿಂದ 10ನೇ ತರಗತಿವರೆಗೆನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶ್ರೇಯಸ್, ಆಕಾಂಕ್ಷ ಪಲ್ಲಕ್ಕಿ ಶಿರಾಂಪುರ ವಿದ್ಯಾರ್ಥಿಗಳಾಗಿದ್ದು, ಶಾಂತಮೂರ್ತಿ  ತಿಮ್ಮನಹಳ್ಳಿ ವಿದ್ಯಾರ್ಥಿ. ಹಾಸ್ಟೆಲ್‍ನಲ್ಲಿ ಸಿಸಿ ಕ್ಯಾಮರಾಗಳಿವೆ. ಅದನ್ನು ಪರಿಶೀಲಿಸುತ್ತೇನೆ ಎಂದು ಕಿರಣ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT