ಪೋಷಕರ ಆಕ್ರಂಧನ 
ರಾಜ್ಯ

ವಿಷಾಹಾರದ ಹಿಂದೆ ಕಾಣದ ಕೈಗಳ ಸಂಚು: ಮಾಜಿ ಶಾಸಕ ಕಿರಣ್ ಕುಮಾರ್ ಆರೋಪ!

ತುಮಕೂರು ವಸತಿ ಶಾಲೆಯಲ್ಲಿ ವಿಷಾಹಾರ ತಿಂದು ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಸತಿ ಶಾಲೆಯ ಮಾಲೀಕ ಹಾಗೂ ಮಾಜಿ ಶಾಸಕ ಕಿರಣ್ ಕುಮಾರ್ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಸಂಚು ಅಡಗಿರಬಹುದು ಎಂದು ಶಂಕಿಸಿದ್ದಾರೆ.

ತುಮಕೂರು: ತುಮಕೂರು ವಸತಿ ಶಾಲೆಯಲ್ಲಿ ವಿಷಾಹಾರ ತಿಂದು ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಸತಿ ಶಾಲೆಯ ಮಾಲೀಕ ಹಾಗೂ ಮಾಜಿ ಶಾಸಕ ಕಿರಣ್ ಕುಮಾರ್  ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಸಂಚು ಅಡಗಿರಬಹುದು ಎಂದು ಶಂಕಿಸಿದ್ದಾರೆ.

ಘಟನೆ ಬಗ್ಗೆ ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್ ಅವರು ಗುರುವಾರ ಹೇಳಿಕೆ ನೀಡಿದ್ದು, "ಮಕ್ಕಳ ತಿನ್ನುವ ಊಟದಲ್ಲಿ ನೀಲಿ ಬಣ್ಣ ಕಾಣಿಸಿಕೊಂಡಿತ್ತು, ಹೀಗಾಗಿ ಊಟದಲ್ಲಿ ಯಾರೋ ಔಷಧ ಬೆರೆಸಿರುವ ಸಾಧ್ಯತೆ ಇದೆ ಎಂದು  ಶಂಕಿಸಿದ್ದಾರೆ. "ಪ್ರಕರಣ ಸಂಬಂಧ ಸಿಬ್ಬಂದಿಗಳನ್ನು ವಿಚಾರಿಸಿದಾಗ ಮೂವರು ಮಕ್ಕಳು ಚಪಾತಿ ಪಲ್ಯಾ ಬದಲಿಗೆ ಅನ್ನ ಸಾಂಬರ್ ತಿಂದಿದ್ದಾರೆ. ಆಗ ಸಾಂಬರ್ ನಲ್ಲಿ ವ್ಯತ್ಯಾಸ ಇದ್ದಿದ್ದು ಕಂಡು ಬಂತು. ಕೂಡಲೇ ಅಸ್ವಸ್ಥ ಮಕ್ಕಳನ್ನು  ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಂತರ ಅಲ್ಲಿದ್ದ ಉಳಿದ ಮಕ್ಕಳು ಯಾರು ಊಟ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

"ಹಾಸ್ಟೆಲ್‍ನಲ್ಲಿ 40 ಮಂದಿ ವಿದ್ಯಾರ್ಥಿಗಳಿದ್ದು, 3ನೇ ತರಗತಿಯಿಂದ 10ನೇ ತರಗತಿವರೆಗೆನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶ್ರೇಯಸ್, ಆಕಾಂಕ್ಷ ಪಲ್ಲಕ್ಕಿ ಶಿರಾಂಪುರ ವಿದ್ಯಾರ್ಥಿಗಳಾಗಿದ್ದು, ಶಾಂತಮೂರ್ತಿ  ತಿಮ್ಮನಹಳ್ಳಿ ವಿದ್ಯಾರ್ಥಿ. ಹಾಸ್ಟೆಲ್‍ನಲ್ಲಿ ಸಿಸಿ ಕ್ಯಾಮರಾಗಳಿವೆ. ಅದನ್ನು ಪರಿಶೀಲಿಸುತ್ತೇನೆ ಎಂದು ಕಿರಣ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA, ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

ರಾಮ ಜನ್ಮಭೂಮಿ ಚಳವಳಿಯ ಪ್ರಮುಖ ನಾಯಕ ರಾಮವಿಲಾಸ್ ವೇದಾಂತಿ ವಿಧಿವಶ!

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

ಶಾಕ್ ಕೊಟ್ಟ BCCI, ರೋ-ಕೋ ಮಾತ್ರವಲ್ಲ.. ಟೀಂ ಇಂಡಿಯಾದ ಎಲ್ಲ ಆಟಗಾರರಿಗೂ 'ವಿಜಯ್ ಹಜಾರೆ' ಕಡ್ಡಾಯ

ಕೊಪ್ಪಳ: ಶಾಲಾ ಬಿಸಿಯೂಟದಲ್ಲಿ ಹುಳು ಪತ್ತೆ, ಹೆಡ್ ಮಾಸ್ಟರ್ ಗೆ ಶೋಕಾಸ್ ನೋಟಿಸ್! Video

SCROLL FOR NEXT