ಪೋಷಕರ ಆಕ್ರಂಧನ 
ರಾಜ್ಯ

ವಿಷಾಹಾರದ ಹಿಂದೆ ಕಾಣದ ಕೈಗಳ ಸಂಚು: ಮಾಜಿ ಶಾಸಕ ಕಿರಣ್ ಕುಮಾರ್ ಆರೋಪ!

ತುಮಕೂರು ವಸತಿ ಶಾಲೆಯಲ್ಲಿ ವಿಷಾಹಾರ ತಿಂದು ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಸತಿ ಶಾಲೆಯ ಮಾಲೀಕ ಹಾಗೂ ಮಾಜಿ ಶಾಸಕ ಕಿರಣ್ ಕುಮಾರ್ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಸಂಚು ಅಡಗಿರಬಹುದು ಎಂದು ಶಂಕಿಸಿದ್ದಾರೆ.

ತುಮಕೂರು: ತುಮಕೂರು ವಸತಿ ಶಾಲೆಯಲ್ಲಿ ವಿಷಾಹಾರ ತಿಂದು ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಸತಿ ಶಾಲೆಯ ಮಾಲೀಕ ಹಾಗೂ ಮಾಜಿ ಶಾಸಕ ಕಿರಣ್ ಕುಮಾರ್  ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಸಂಚು ಅಡಗಿರಬಹುದು ಎಂದು ಶಂಕಿಸಿದ್ದಾರೆ.

ಘಟನೆ ಬಗ್ಗೆ ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್ ಅವರು ಗುರುವಾರ ಹೇಳಿಕೆ ನೀಡಿದ್ದು, "ಮಕ್ಕಳ ತಿನ್ನುವ ಊಟದಲ್ಲಿ ನೀಲಿ ಬಣ್ಣ ಕಾಣಿಸಿಕೊಂಡಿತ್ತು, ಹೀಗಾಗಿ ಊಟದಲ್ಲಿ ಯಾರೋ ಔಷಧ ಬೆರೆಸಿರುವ ಸಾಧ್ಯತೆ ಇದೆ ಎಂದು  ಶಂಕಿಸಿದ್ದಾರೆ. "ಪ್ರಕರಣ ಸಂಬಂಧ ಸಿಬ್ಬಂದಿಗಳನ್ನು ವಿಚಾರಿಸಿದಾಗ ಮೂವರು ಮಕ್ಕಳು ಚಪಾತಿ ಪಲ್ಯಾ ಬದಲಿಗೆ ಅನ್ನ ಸಾಂಬರ್ ತಿಂದಿದ್ದಾರೆ. ಆಗ ಸಾಂಬರ್ ನಲ್ಲಿ ವ್ಯತ್ಯಾಸ ಇದ್ದಿದ್ದು ಕಂಡು ಬಂತು. ಕೂಡಲೇ ಅಸ್ವಸ್ಥ ಮಕ್ಕಳನ್ನು  ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಂತರ ಅಲ್ಲಿದ್ದ ಉಳಿದ ಮಕ್ಕಳು ಯಾರು ಊಟ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

"ಹಾಸ್ಟೆಲ್‍ನಲ್ಲಿ 40 ಮಂದಿ ವಿದ್ಯಾರ್ಥಿಗಳಿದ್ದು, 3ನೇ ತರಗತಿಯಿಂದ 10ನೇ ತರಗತಿವರೆಗೆನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶ್ರೇಯಸ್, ಆಕಾಂಕ್ಷ ಪಲ್ಲಕ್ಕಿ ಶಿರಾಂಪುರ ವಿದ್ಯಾರ್ಥಿಗಳಾಗಿದ್ದು, ಶಾಂತಮೂರ್ತಿ  ತಿಮ್ಮನಹಳ್ಳಿ ವಿದ್ಯಾರ್ಥಿ. ಹಾಸ್ಟೆಲ್‍ನಲ್ಲಿ ಸಿಸಿ ಕ್ಯಾಮರಾಗಳಿವೆ. ಅದನ್ನು ಪರಿಶೀಲಿಸುತ್ತೇನೆ ಎಂದು ಕಿರಣ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

SCROLL FOR NEXT