ಸಂಗ್ರಹ ಚಿತ್ರ 
ರಾಜ್ಯ

ಕುಡಿದು ವಾಹನ ಚಾಲನೆ: 21 ಸಾವಿರ ವಾಹನ ಚಾಲಕರ ಲೈಸೆನ್ಸ್ ಅಮಾನತು

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಆರೋಪದ ಮೇಲೆ ಕಳೆದ 2 ವರ್ಷಗಳಲ್ಲಿ ಸುಮಾರು 21,007 ಮಂದಿ ವಾಹನ ಚಾಲಕರ ಲೈಸೆನ್ಸ್ ಅನ್ನು ಅಮಾನತು...

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಆರೋಪದ ಮೇಲೆ ಕಳೆದ 2 ವರ್ಷಗಳಲ್ಲಿ ಸುಮಾರು 21,007 ಮಂದಿ ವಾಹನ ಚಾಲಕರ ಲೈಸೆನ್ಸ್ ಅನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು ನಗರ ಪೊಲೀಸರು ವಿವಿಧ ವಿಭಾಗಗಳಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 32,756 ಚಾಲಕರ ಲೈಸೆನ್ಸ್ ಅಮಾನತು ಮಾಡಿದ್ದಾರೆ ಎಂದು ನಗರ ಸಂಚಾರಿ ಪೊಲೀಸ್ ಹೆಚ್ಚುವರಿ ಆಯುಕ್ತ ಆರ್. ಹಿತೇಂದ್ರ ಹೇಳಿದ್ದಾರೆ. 2015 ಕ್ಕೆ ಹೋಲಿಸಿದರೇ 2017 ರಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಿವೆ. 14, 994 ರಿಂದ 17,762 ಕ್ಕೇರಿದೆ,

ಇನ್ನೂ ನಗರದಲ್ಲಿ ಅಪಘಾತ ಪ್ರಕರಣಗಳು ಕೂಡ ಹೆಚ್ಚಿವೆ. 2015 ರಲ್ಲಿ 4,828 ರಷ್ಟು ಇದ್ದದ್ದು 2016 ರಲ್ಲಿ 7,506ಕ್ಕೇರಿದೆ. ಸುಪ್ರೀಂ ಕೋರ್ಟ್ ಸಂಚಾರಿ ನಿಯಮ ಉಲ್ಲಂಘಿಸುವವರ ಲೈಸೆನ್ಸ್ ಗಳನ್ನು 3 ತಿಂಗಳ ಕಾಲ ಅಮಾನತುಗೊಳಿಸುವಂತೆ ಹೇಳಿದೆ. ಅಧಿಕ ವೇಗ, ಸಿಗ್ನಲ್ ಜಂಪ್, ಓವರ್ ಲೋಡಿಂಗ್, ಸರಕು ವಾಹನಗಳಲ್ಲಿ ಜನರ ಪ್ರಯಾಣ, ಮಧ್ಯ ಸೇವನೆ, ಮಾದಕ ವಸ್ತು ಸೇವನೆ ಮತ್ತು ಮೊಬೈಲ್ ಬಳಕೆ ಮಾಡಿ ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಪದೇ ಪದೇ ಮದ್ಯಸೇವಿಸಿ ಚಾನೆ ಮಾಡುವವರ ಲೈಸೆನ್ಸ್ ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಅಮಾನತುಗೊಳಿಸಲಾಗಿದೆ.  ಒಂದು ಬಾರಿ ಲೈಸೆನ್ಸ್ ಅಮಾನತುಗೊಂಡರೇ ಆ ಚಾಲಕ ಯಾವುದೇ ವಾಹನವನ್ನು ಚಲಾಯಿಸುವಂತಿಲ್ಲ,  ಆದರೆ ಲೈಸೆನ್ಸ್ ಅಮಾನತುಗೊಂಡವರು ರಾಜಾರೋಷವಾಗಿ ಮತ್ತೆ ವಾಹನ ಚಲಾಯಿಸುತ್ತಿದ್ದಾರೆ. ಲೈಸೆನ್ಸ್ ಕಳೆದು ಹೋಗಿದೆ ಎಂದು ನಕಲಿ ದೂರು ದಾಖಲಿಸುತ್ತಿದ್ದಾರೆ ಎಂದು ಸಂಚಾರಿ ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT