ಬಿಡಿಎ 
ರಾಜ್ಯ

ಬಿಡಿಎ ಹೊಸ ಆಯುಕ್ತರ ಮುಂದೆ ಸಾಲು ಸಾಲು ಸವಾಲು

ರಾಜ್ಯ ಸರ್ಕಾರ ಬಿಡಿಎ ಆಯುಕ್ತರಾಗಿದ್ದ ರಾಜ್ ಕುಮಾರ್ ಖತ್ರಿ ಅವರನ್ನು ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿದೆ.

ಬೆಂಗಳೂರು: ರಾಜ್ಯ ಸರ್ಕಾರ ಬಿಡಿಎ ಆಯುಕ್ತರಾಗಿದ್ದ ರಾಜ್ ಕುಮಾರ್ ಖತ್ರಿ ಅವರನ್ನು ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿದೆ. 
ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಕೇಶ್ ಸಿಂಗ್ ಅವರು ಈಗ ಬಿಡಿಎ ಆಯುಕ್ತರಾಗಿ ನೇಮಕಗೊಂಡಿದ್ದರೆ, ರಾಜ್ ಕುಮಾರ್ ಖತ್ರಿ ಅವರನ್ನು ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಅರ್ಕಾವತಿ ಲೇಔಟ್ ಹಾಗೂ ಕೆಂಪೇಗೌಡ ಲೇಔಟ್ ಗಳ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಜನಸಾಮಾನ್ಯರಿಗೆ ಸಹಾಯ ಮಾಡುತ್ತಿಲ್ಲ ಎಂಬ ಆರೋಪದ ಪರಿಣಾಮವಾಗಿ ರಾಜ್ ಕುಮಾರ್ ಖತ್ರಿ ಅವರ ವರ್ಗಾವಣೆಗೆ ಒತ್ತಡ ಹೆಚ್ಚಿತ್ತು. ರಾಜ್ ಕುಮಾರ್ ಖತ್ರಿ ಅವರನ್ನು ವರ್ಗಾವಣೆಗೊಳಿಸಲು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ನೇತೃತ್ವದ ನಿಯೋಗ ಜ.28 ರಂದೇ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತ್ತಾದರೂ ಈಗ ರಾಜ್ ಕುಮಾರ್ ಖತ್ರಿ ಅವರನ್ನು ವರ್ಗಾವಣೆ ಮಾಡಲಾಗಿದೆ. 
ಬಿಡಿಎಗೆ ಹೊಸ ಆಯುಕ್ತರಾಗಿ ಬಂದಿರುವ ರಾಕೇಶ್ ಸಿಂಗ್ ಅವರೆದುರು ಹಲವು ಸವಾಲುಗಳಿದ್ದು, ಬಿಡಿಎ ಮಾಸ್ಟರ್ ಪ್ಲಾನ್ 2031 ಇನ್ನಷ್ಟೇ ಸಿದ್ಧಗೊಳ್ಳಬೇಕಿದೆ. ಅಷ್ಟೇ ಅಲ್ಲದೇ ಅರ್ಕಾವತಿ ಲೇಔಟ್ ನಲ್ಲಿ ನಿವೇಶನ ಪಡೆದಿದ್ದ ಜನರು ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಇದ್ದರೆ ಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೆಲ್ಲದರ ನಡುವೆ ನಿವೇಶನ ಹಂಚಿಕೆಯಲ್ಲಿ ಅತಿ ಹೆಚ್ಚಿನ ಭ್ರಷ್ಟಾಚಾರದ ಆರೋಪಗಳೂ ಸಹ ಹೊಸ ಆಯುಕ್ತರಿಗೆ ಸವಾಲಿನ ಸಂಗತಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT