ಸುಹಾನಾ ಸೈಯ್ಯದ್ 
ರಾಜ್ಯ

ಟೀಕೆ, ಬೆದರಿಕೆಗೆ ಸೊಪ್ಪು ಹಾಕದ ಸುಹಾನಾ ಪೋಷಕರು: ಮಗಳ ಬೆಂಬಲಕ್ಕೆ ನಿಂತ ಕುಟುಂಬಸ್ಥರು

ಖಾಸಗಿ ಚಾನೆಲ್ ನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಹಿಂದೂ ಭಕ್ತಿ ಗೀತೆ ಹಾಡಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ಗಾಯಕಿ

ಶಿವಮೊಗ್ಗ:  ಖಾಸಗಿ ಚಾನೆಲ್ ನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ  ಹಿಂದೂ ಭಕ್ತಿ ಗೀತೆ ಹಾಡಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ಗಾಯಕಿ ಸುಹಾನಾ ಸೈಯ್ಯದ್ ಬೆಂಬಲಕ್ಕೆ ಆಕೆಯ ಪೋಷಕರು ಮುಂದಾಗಿದ್ದಾರೆ.

ಆಕೆಯ ಹಾಡುವ ಅಭಿರುಚಿಗೆ ನಾವು ಬೆಂಬಲ ನೀಡುತ್ತೇವೆ, ಯಾವುದೇ ಟೀಕೆಗಳಿಗೂ ಸೊಪ್ಪು ಹಾಕುವುದಿಲ್ಲ ಎಂದು ಶಿಕ್ಷಕರೂ ಆಗಿರುವ ಸುಹಾನಾ ತಂದೆ
ಸೈಯ್ಯದ್ ಮುನೀರ್ ಹೇಳಿದ್ದಾರೆ.

ಯಾವುದೇ ಟೀಕೆಗಳಿಗೆ ನಾವು ಮಣೆ ಹಾಕುವುದಿಲ್ಲ, ಮುಂದಿನ ದಿನಗಳಲ್ಲಿ ಆಕೆಯ ಹಾಡಿನ ಪ್ರದರ್ಶನ ನೀಡುತ್ತಾಳೆ, ನಾವು ಅವಳಿಗೆ ಬೆಂಬಲವಾಗಿ ನಿಲ್ಲುತ್ತೇವೆ. ಆಕೆಯ ಹಾಡಿನ ಅಭ್ಯಾಸದ ಕಡೆ ಗಮನ ನೀಡುತ್ತೇವೆ ಎಂದು ಸೈಯ್ಯದ್ ಮುನೀರ್ ಹೇಳಿದ್ದಾರೆ.

ಕನ್ನಡ ಟಿವಿ ಚಾನೆಲ್ ನಲ್ಲಿ ಪ್ರಸಾರವಾದ ಸಂಗೀತ ಕಾರ್ಯಕ್ರಮದಲ್ಲಿ ಸುಹಾನಾ  ಹಿಂದೂ ಭಕ್ತಿಗೀತೆ ಹಾಡಿದ್ದಳು. ಇದಾದ ನಂತರ ಆಕೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಅನ್ಯ ಸಮುದಾಯದವರು ಹಿಂದೂ ಭಕ್ತಿ ಗೀತೆಗಳನ್ನು ಹಾಡಬಾರದು ಎಂದು ವಿರೋಧಿಸಲಾಗಿತ್ತು. ಆದರೆ ಸಚಿವ ಯುಟಿ ಖಾದರ್ ಸೇರಿದಂತೆ ಸುಹಾನಾಗೆ  ಹಲವರು ಬೆಂಬಲ ಸೂಚಿಸಿದ್ದರು.

ಸುಹಾನಾ ಶಿವಮೊಗ್ಗ ಸಾಗರ ತಾಲೂಕಿನ ಭೀಮನ ಕುಂಟೆಯ ಶಿಕ್ಷಕ ದಂಪತಿಯ ಪುತ್ರಿ. ಸಾಗರದಲ್ಲಿ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದಳು, ನಂತರ ಸಾಗರದಲ್ಲಿ ಕಾಲೇಜು ವಿದ್ಯಾಭ್ಯಾಸ ಮುಂಗಿಸ ಸದ್ಯ ಬೆಂಗಳೂರಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾಳೆ. ಶಾಲಾ ದಿನಗಳಿಂದಲೇ ಸುಹಾನಾ ಗಾಯನ ಸ್ಪರ್ದೆಗಳಲ್ಲಿ ಭಾಗವಹಿಸುತ್ತಿದ್ದಳು. ಈ ಮಟ್ಟಕ್ಕೆ ತಲುಪಲು ಆಕೆ ತುಂಬಾ ಶ್ರಮ ವಹಿಸಿದ್ದಾಳೆ.

ಪ್ರತಿಭೆಯನ್ನು ನೀರೆರೆದು ಪ್ರೋತ್ಸಾಹಿಸದೇ ಧರ್ಮದ ಹೆಸರಿನಲ್ಲಿ ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ವಿವಾದಾತ್ಮಕ ವಿಷಯಗಳನ್ನು ಚರ್ಚೆ ಮಾಡುತ್ತಿರುವುದು ಖಂಡನೀಯ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ದಿನಕ್ಕೊಂದು, ಕ್ಷಣಕ್ಕೊಂದು ಮಾತನಾಡಬೇಡಿ": ಇರಾನ್ ಯುದ್ಧದ ಬಗ್ಗೆ ಟ್ರಂಪ್​ಗೆ ಮ್ಯಾಕ್ರನ್ ಮಂಗಳಾರತಿ!

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದಲ್ಲಿ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

IPL 2026: ಅಭಿಷೇಕ್, ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್; KKR ವಿರುದ್ಧ SRH ಭರ್ಜರಿ ಗೆಲುವು

ಪಶ್ಚಿಮ ಏಷ್ಯಾ ಯುದ್ಧದ ಪರಿಸ್ಥಿತಿ ನಿರ್ವಹಣೆ: ಮೋದಿ ಸರ್ಕಾರವನ್ನು ಹಾಡಿ ಹೊಗಳಿದ ಕಾಂಗ್ರೆಸ್ ಹಿರಿಯ ನಾಯಕ; ಪಕ್ಷಕ್ಕೆ ತೀವ್ರ ಮುಜುಗರ!

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...

SCROLL FOR NEXT