ಸಾಂದರ್ಭಿಕ ಚಿತ್ರ 
ರಾಜ್ಯ

ಬಿಗಿ ಭದ್ರತೆಯುಳ್ಳ ಮಂಗಳೂರು ಜೈಲಿನಿಂದ ವಿಚಾರಣಾಧೀನ ಕೈದಿ ಎಸ್ಕೇಪ್

: ಪೊಲೀಸರ ಬಿಗಿ ಭದ್ರತೆಯ ನಡುವೆಯೂ ವಿಚಾರಣಾಧೀನ ಕೈದಿಯೊಬ್ಬ ಮಂಗಳೂರು ಜೈಲಿನಿಂದ ಇಂದು ಮುಂಜಾನೆ ಪರಾರಿಯಾಗಿದ್ದಾನೆ....

ಮಂಗಳೂರು: ಪೊಲೀಸರ ಬಿಗಿ ಭದ್ರತೆಯ ನಡುವೆಯೂ ವಿಚಾರಣಾಧೀನ ಕೈದಿಯೊಬ್ಬ ಮಂಗಳೂರು ಜೈಲಿನಿಂದ ಇಂದು ಮುಂಜಾನೆ ಪರಾರಿಯಾಗಿದ್ದಾನೆ.

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿ ಜಿನ್ನಪ್ಪ  ಎಂಬ ಅತ್ಯಾಚಾರ ಆರೋಪಿ ಪರಾರಿಯಾಗಿದ್ದಾನೆ. 2015 ರಲ್ಲಿ ಅತ್ಯಾಚಾರ ಪ್ರಕರಣದಲ್ಲಿ  ಈತನ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ಈ ಪ್ರಕರಣವನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು.

ಜಿಲ್ಲಾ ಕಾರಾಗೃಹದಲ್ಲಿ ಈತನಿಗೆ ಅಡುಗೆ ಸಹಾಯಕನ ಕೆಲಸಕ್ಕೆ ನೇಮಿಸಲಾಗಿತ್ತು. ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಅಡುಗೆ ಮನೆಯಲ್ಲಿ ಕೆಲಸ ಮಾಡುವ ಕೈದಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಲಾಗಿತ್ತು, ಈ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸಿಕೊಂಡ ಆತ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಜಾಗದಲ್ಲಿ ಹೆಚ್ಚಿನ ಭದ್ರತೆ ಇರಲಿಲ್ಲ. ಹೀಗಾಗಿ ಆತ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಜಿನ್ನಪ್ಪ ಮೂರು ಮಹಿಳೆಯರನ್ನು ವಿವಾಹವಾಗಿದ್ದ.ಇನ್ನೂ ಜಿನ್ನಪ್ಪನ ಪತ್ತೆಗಾಗಿ ಪೊಲೀಸರು ಮೂರು ವಿಶೇಶ ತಂಡಗಳನ್ನು ರಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT