ಶಾಲೆ 
ರಾಜ್ಯ

ವಿದ್ಯಾವಾರಿಧಿ ವಸತಿ ಶಾಲೆ ವಿಷಾಹಾರದ ಸೇವನೆ ಪ್ರಕರಣ: 4ಕ್ಕೆ ಏರಿದ ಮೃತರ ಸಂಖ್ಯೆ

ತುಮಕೂರಿನ ಚಿಕ್ಕನಾಯಕನಹಳ್ಳಿಯ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಸೆಕ್ಯುರಿಟಿ ಗಾರ್ಡ್ ರಮೇಶ್...

ತುಮಕೂರು: ತುಮಕೂರಿನ ಚಿಕ್ಕನಾಯಕನಹಳ್ಳಿಯ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಸೆಕ್ಯುರಿಟಿ ಗಾರ್ಡ್ ರಮೇಶ್ ಇಂದು ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. 
ಮಾರ್ಚ್ 9ರಂದು ಸಂಭಿಸಿದ್ದ ಈ ದುರಂತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರು. ಸೆಕ್ಯುರಿಟಿ ಗಾರ್ಡ್ ರಮೇಶ್ ಹಾಗೂ ಇನ್ನೋರ್ವ ವಿದ್ಯಾರ್ಥಿ ಸುದರ್ಶನ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 
ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ್ದ ಶಾಂತಮೂರ್ತಿ, ಆಕಾಂಕ್ಷ ಪಲ್ಲಕ್ಕಿ ಮತ್ತು ಶ್ರೇಯಸ್ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ರಮೇಶ್ ಅವರು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತ ಮೇಲೆ ಶೇ.50 ಸುಂಕ ರದ್ದು ಮಾಡಿ, ಇದರಿಂದ ನಮ್ಮ ದೇಶಕ್ಕೇ ನಷ್ಟ': Donald Trump ಗೆ ಸೆನೆಟ್ ಸದಸ್ಯರ ಬೇಡಿಕೆ, ನಿರ್ಣಯ ಮಂಡನೆ

ಕಾಂಗ್ರೆಸ್‌ ಪ್ರತಿಭಟನೆಗೆ ಹೊಸ ಅಸ್ತ್ರ: ಆಳಂದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ CID ಚಾರ್ಜ್ ಶೀಟ್ ಸಲ್ಲಿಕೆ

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

MUDA Scam: ಮಾಜಿ ಆಯುಕ್ತರಿಂದ ಸಂಬಂಧಿಕರ ಮೂಲಕ ನಗದು ಲಂಚ ಪಡೆದು ನಿವೇಶನ ಹಂಚಿಕೆ!

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ: ಶಿವರಾಜ್ ತಂಗಡಗಿ

SCROLL FOR NEXT