ದಲಿತ ಯುವಕರ ಮೇಲೆ ಹಲ್ಲೆ: ನರಗುಂದದಲ್ಲಿ ಪರಿಸ್ಥಿತಿ ಉದ್ವಿಗ್ನ 
ರಾಜ್ಯ

ದಲಿತ ಯುವಕರ ಮೇಲೆ ಹಲ್ಲೆ: ನರಗುಂದದಲ್ಲಿ ಪರಿಸ್ಥಿತಿ ಉದ್ವಿಗ್ನ

ದಲಿತ ಸಮುದಾಯಕ್ಕೆ ಸೇರಿದ ನಾಲ್ವರು ಯುವಕರನ್ನು ಬೆತ್ತಲೆಗೊಳಿಸಿ, ಹಲ್ಲೆ ನಡೆಸಿರುವ ಘಟನೆಯೊಂದು ಗದಗ ಜಿಲ್ಲೆಯ ನರುಗಂದದಲ್ಲಿ ಭಾನುವಾರ ನಡೆದಿದೆ...

ಹುಬ್ಬಳ್ಳಿ: ದಲಿತ ಸಮುದಾಯಕ್ಕೆ ಸೇರಿದ ನಾಲ್ವರು ಯುವಕರನ್ನು ಬೆತ್ತಲೆಗೊಳಿಸಿ, ಹಲ್ಲೆ ನಡೆಸಿರುವ ಘಟನೆಯೊಂದು ಗದಗ ಜಿಲ್ಲೆಯ ನರುಗಂದದಲ್ಲಿ ಭಾನುವಾರ ನಡೆದಿದೆ. 
ನಾಲ್ವರು ಯುವಕರನ್ನು ಅರೆ ಬೆತ್ತಲೆಗೊಳಿಸಿರುವ ದುಷ್ಕರ್ಮಿಗಳು ರಸ್ತೆ ಮಧ್ಯೆ ಥಳಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
ಖವಾಜಾ ಸಬ್ ಮಲ್ಲಸಮುದ್ರ (26), ಗೌಸುಸಬ್ ರಾವುತ್ (17)ಸ ಮಲ್ಲಿಕಾರ್ಜುನ ನಳಬಂದ್ (18) ಮತ್ತು ಜಾಕ್ರಿ ಮನಿಯಾರ್ ಥಳಿತಕ್ಕೊಳಗಾದ ಯುವಕರಾಗಿದ್ದು, ನಾಲ್ವರು ಯುವಕರು ನರಗುಂದದ ಟೌನ್ ನಿವಾಸಿಗಳಾಗಿದ್ದಾರೆ. 
ಜಮಲ್ ಕಮಂದರ್ ಎಂಬ ಗೆಳೆಯನೊಬ್ಬ ಈ ವಿಡಿಯೋವನ್ನು ಮಾಡಿದ್ದ. 8 ತಿಂಗಳ ಹಿಂದೆ ನಮ್ಮ ಮೇಲೆ ಹಲ್ಲೆ ನಡೆಸಲಾಗಿತ್ತು. ನಂತರ ವಿಡಿಯೋವನ್ನು ಬಿಡುಗಡೆ ಮಾಡುವುದಾಗಿ ಆತ ನಮಗೆ ಬೆದರಿಕೆ ಹಾಕುತ್ತಿದ್ದ. ಶನಿವಾರ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಸಂಘಟನೆಯೊಂದಕ್ಕೆ ಸಿಕ್ಕಿದೆ ಎಂದು ಮಲ್ಲಸಮುದ್ರ ಹೇಳಿದ್ದಾರೆ. 
ಇದೀಗ ಈ ವಿಡಿಯೋ ಭಾರೀ ವಿರೋಧಗಳು ವ್ಯಕ್ತವಾಗುತ್ತಿದ್ದು, ನಿನ್ನೆಯಷ್ಟೇ ನೂರಾರು ಸಂಖ್ಯೆಯಲ್ಲಿ ನರಗುಂದದಲ್ಲಿ ಪ್ರತಿಭಟನಾ ರ್ಯಾಲಿಯನ್ನು ನಡೆಸಲಾಗಿದೆ. ಪ್ರತಿಭಟನೆ ವೇಳೆ ಅಧಿಕಾರಿಗಳ ವಿರುದ್ಧ ಆರೋಪಗಳು ವ್ಯಕ್ತವಾಗಿದ್ದು, ನರಗುಂದ ಇನ್ಸ್ ಪೆಕ್ಟರ್ ರಾಮಾಕಾಂತ್ ಅವರು ದಲಿತ ಯುವಕರ ಮೇಲೆಯೇ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ಹೇಳಿದ್ದಾರೆ. 
ಇನ್ನು ಈ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಎಸ್ ಸಂತೋಷ್ ಬಾಬು ಅವರು, ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ. ಇದು ಕೋಮವಾದಿಗಳ ಘರ್ಷಣೆಯಲ್ಲ ಎಂದು ತಿಳಿಸಿದ್ದಾರೆ. 
ಇನ್ನು ಎರಡೂ ಸಮುದಾಯಗಳು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಈ ವರೆಗೂ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಮತ್ತಷ್ಟು ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧನಕ್ಕೊಳಪಡಿಸುತ್ತೇವೆಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ