ಶ್ರವಣಬೆಳಗೊಳ- ನೆಲಮಂಗಲ ರೈಲು ಮಾರ್ಗ ಪೂರ್ಣಗೊಂಡರೂ ಉದ್ಘಾಟನೆ ಮುಂದೂಡಿಕೆ 
ರಾಜ್ಯ

ಶ್ರವಣಬೆಳಗೊಳ- ನೆಲಮಂಗಲ ರೈಲು ಮಾರ್ಗ ಪೂರ್ಣಗೊಂಡರೂ ಉದ್ಘಾಟನೆ ಮುಂದೂಡಿಕೆ

ನೆಲಮಂಗಲ-ಶ್ರವಣಬೆಳಗೊಳ ರೈಲು ಮಾರ್ಗ ಪೂರ್ಣಗೊಂಡಿದ್ದರೂ ಉದ್ಘಾಟನೆಗೆ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.

ಬೆಂಗಳೂರು: ನೆಲಮಂಗಲ-ಶ್ರವಣಬೆಳಗೊಳ ರೈಲು ಮಾರ್ಗ ಪೂರ್ಣಗೊಂಡಿದ್ದರೂ ಉದ್ಘಾಟನೆಗೆ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ. ಮಾ.9 ಕ್ಕೆ ನವದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ  ಮಾಡಲು ರೈಲ್ವೆ ಸಚಿವ ಸುರೇಶ್ ಪ್ರಭು ಪ್ರಸ್ತಾವನೆ ನೀಡಿದ್ದರಾದರೂ, ಸಿಎಂ ಸಿದ್ದರಾಮಯ್ಯ ಬಜೆಟ್ ಕಾರಣ ನೀಡಿ ಉದ್ಘಾಟನೆಯ ದಿನಾಂಕದಂದು ಉಪಸ್ಥಿತಿ ಇರುವುದಕ್ಕೆ ಸಾಧ್ಯವಿಲ್ಲ ಎಂಬುದನ್ನು ಮನವಿಕೆ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲು ಮಾರ್ಗ ಉದ್ಘಾಟನೆ ದಿನಾಂಕ ಮುಂದೂಡಲ್ಪಟ್ಟಿದೆ. 
ರೈಲ್ವೆ ಇಲಾಖೆಯ ಸುರಕ್ಷತಾ ವಿಭಾಗದ ಆಯುಕ್ತರು 111 ಕಿಮಿ ದೂರದ ಬೆಂಗಳೂರು-ಹಾಸನ ರೈಲು ಮಾರ್ಗದ ಕಾರ್ಯಾರಂಭಕ್ಕೆ ಫೆ.21 ರಂದೇ ಅನುಮತಿ ನೀಡಿದ್ದಾರೆ.  ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರೇ ರೈಲು ಮಾರ್ಗವನ್ನು ಉದ್ಘಾಟಿಸಬೇಕೆಂಬುದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಭಿಪ್ರಾಯ ಹೊಂದಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡುವುದು ಸಾಧ್ಯವಾಗದೇ ಇದ್ದ ಹಿನ್ನೆಲೆಯಲ್ಲಿ ರೈಲ್ವೆ ಸಚಿವ ಸುರೇಶ್ ಪ್ರಭು ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ರಾಜ್ಯ ಬಜೆಟ್ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದ್ದ ದಿನಾಂಕವನ್ನೂ ಮುಂದೂಡಲಾಗಿದ್ದು, ಮಾ.15 ರ ನಂತರ ಉದ್ಘಾಟನಾ ಕಾರ್ಯಕ್ರಮ ಆಯೋಜಿಸುವಂತೆ ರೈಲ್ವೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT