ಸಾಂದರ್ಭಿಕ ಚಿತ್ರ 
ರಾಜ್ಯ

ದುಬಾರಿ ಹ್ಯೂಬ್ಲಾಟ್ ವಾಚ್ ಪ್ರಕರಣ: ಎಸಿಬಿ ಯಿಂದ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್

ದುಬಾರಿ ಹ್ಯೂಬ್ಲಾಟ್ ವಾಚ್ ಪ್ರಕರಣ ತನಿಖೆ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್...

ಬೆಂಗಳೂರು: ದುಬಾರಿ ಹ್ಯೂಬ್ಲಾಟ್ ವಾಚ್ ಪ್ರಕರಣ ತನಿಖೆ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ.

ಕಳೆದ ವರ್ಷ ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ಸಂಸ್ಥೆಯ ಅಧಿಕಾರ ಮೊಟಕು ಗೊಳಿಸಿ ಎಸಿಬಿ ರಚಿಸಿ ಸರಿಯಾಗಿ ಇಂದಿಗೆ ಒಂದು ವರ್ಷವಾಗಿದೆ.

ಸಿಎಂ ಸಿದ್ದರಾಮಯ್ಯ ಅವರು 70 ಲಕ್ಷ ಬೆಲೆಯ ವಜ್ರ ಖಚಿತ ಹ್ಯೂಬ್ಲಾಟ್ ವಾಚ್ ಧರಿಸಿದ್ದರ ಸಂಬಂಧ ವಕೀಲ ನಟರಾಜ ಶರ್ಮ, ಆರ್ ಟಿ ಐ ಕಾರ್ಯಕರ್ತ ರಾಮಮೂರ್ತಿ ಗೌಡ ಮತ್ತು ಟಿ.ಜೆ ಅಬ್ರಹಾಂ ಪ್ರತ್ಯೇಕವಾಗಿ ಎಸಿಬಿಯಲ್ಲಿ ದೂರು ದಾಖಲಿಸಿದ್ದರು.

ದೂರು ಸ್ವೀಕರಿಸಿದ ನಂತರ ಎಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದರು. ದುಬೈ ಮೂಲದ ಸಿಎಂ ಸ್ನೇಹಿತ ಡಾ. ಗಿರೀಶ್ ಚಂದ್ರ ವರ್ಮಾ ಅವರ ಹೇಳಿಕೆ ಆಧಾರದ ಮೇಲೆ  ಪ್ರಾಥಮಿಕ ತನಿಖೆಯ ನಂತರ ಪ್ರಕರಣವನ್ನು ಕ್ಲೋಸ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ನನ್ನ ಹ್ಯೂಬ್ಲೋಟ್ ವಾಚ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದರು, ನಂತರ ನಾನು ವಾಚ್ ಅನ್ನು ಸಿದ್ದರಾಮಯ್ಯ ಅವರಿಗೆ ಉಡುಗೊರೆಯಾಗಿ ನೀಡಿದೆ. ಆದರೆ ಅದನ್ನು ತೆಗೆದುಕೊಳ್ಳಲು ಸಿಎಂ  ನಿರಾಕರಿಸಿದ್ದರು, ನಾನೇ ಬಲವಂತವಾಗಿ ನೀಡಿದ್ದೆ ಎಂದು ಡಾ.ಗಿರೀಶ್ ಚಂದ್ರ ವರ್ಮಾ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!