ಮಕ್ಕಳನ್ನು ಕಳೆದುಕೊಂಡು ರೋಧಿಸುತ್ತಿರುವ ಪೋಷಕರು 
ರಾಜ್ಯ

ವಿದ್ಯಾವಾರಿಧಿ ಶಾಲೆ ದುರಂತ:ಮೃತ ಮಕ್ಕಳು ಸೇವಿಸಿದ್ದ ಸಾರಿನಲ್ಲಿ ಕೀಟನಾಶಕ ಮಿಶ್ರಣ?

ವಿದ್ಯಾವಾರಿಧಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ಸಾವಿಗೀಡಾದ ಪ್ರಕರಣ ಸಂಬಂಧ ಸಾಂಬಾರಿನಲ್ಲಿ ಕೀಟನಾಶಕ ಬಳಸಿರುವ ಶಂಕೆ...

ತುಮಕೂರು: ವಿದ್ಯಾವಾರಿಧಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ಸಾವಿಗೀಡಾದ ಪ್ರಕರಣ ಸಂಬಂಧ ಸಾಂಬಾರಿನಲ್ಲಿ ಕೀಟನಾಶಕ ಬಳಸಿರುವ ಶಂಕೆ ವ್ಯಕ್ತವಾಗಿದೆ.

ಮೃತ ವಿದ್ಯಾರ್ಥಿಗಲ ಮರಣೋತ್ತರ ಪರೀಕ್ಷೆ ವರದಿ  ಆಧಾರದ ಮೇಲೆ ನಡೆದ ಪ್ರಾಥಮಿಕ ತನಿಖೆಯಿಂದ ಸಾರಿನಲ್ಲಿ ಅಲ್ಯೂಮಿನಿಯಂ ಪ್ರಾಸ್ಪೇಟ್ ಎಂಬ ಕೀಟನಾಶಕ ಬೆರೆಸಲಾಗಿತ್ತು ಎಂದು ತಿಳಿದು ಬಂದಿದೆ.

ರಸಾಯನಿಕ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಇದನ್ನು ಸುಲಭವಾಗಿ ಖರೀದಿಸಬಹುದಾಗಿದೆ. ವೈದ್ಯರ ತಂಡ ಈ ರೀತಿಯ ರಾಸಾಯನಿಕ ವಸ್ತುವನ್ನು ಹುಳಿಯಾರುವಿನ ಅಂಗಡಿಗಳಿಂದ ಸಂಗ್ರಹಿಸಿದೆ.

ರೈತರು ಈ ಕೀಟನಾಶಕವನ್ನು ಧಾನ್ಯಗಳ ಚೀಲದಲ್ಲಿ ಹಾಕಿಡುತ್ತಾರೆ ಎಂದು ಡಾಯ ರಂಗಸ್ವಾಮಿ ಹೇಳಿದ್ದಾರೆ.ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರುವವರೆಗೂ ನಾವು ಯಾವುದೇ ನಿರ್ಧಾರಕ್ಕೆ ಬರಲಾಗಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಹುಳಿಯಾರಿನ ವಿದ್ಯಾವಾರಿಧಿ ಇಂಟರ್‌ನ್ಯಾಷನಲ್‌ ಶಾಲೆಯ ವಿದ್ಯಾರ್ಥಿಗಳ ಪೋಷಕರು ಹಾಗೂ ಕಾಯಿ ತಿಮ್ಮನಹಳ್ಳಿ ಗ್ರಾಮಸ್ಥರು ಶಾಲೆಯ ಆವರಣದಲ್ಲಿ  ದಿಢೀರ್‌ ಪ್ರತಿಭಟನೆ ನಡೆಸಿದರು. ಪ್ರಕರಣದ ಬಳಿಕ ಶಾಲೆಗೆ ರಜೆ ಘೋಷಿಸಲಾಗಿತ್ತು. ಬೆಳಿಗ್ಗೆ ಶಾಲೆ ಪುನಾರಂಭಗೊಂಡಿತ್ತು. ಪ್ರತಿಭಟನೆಯಿಂದಾಗಿ ಶಾಲೆಯ ಮುಂಭಾಗ ಉದ್ವಿಗ್ನ ವಾತಾವರಣ ಕಂಡುಬಂತು. ಶಾಲೆಯ ಮಾಲೀಕರಾದ ಕಿರಣ್‌ಕುಮಾರ್‌, ಕವಿತಾ ಸ್ಥಳಕ್ಕೆ ಬಂದು ನಮ್ಮ ಪ್ರಶ್ನೆಗಳಿಗೆ ಉತ್ತರ ಹೇಳಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ರಾತ್ರಿವರೆಗೂ ಪ್ರತಿಭಟನೆ ಮುಂದುವರೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ