ಮಕ್ಕಳನ್ನು ಕಳೆದುಕೊಂಡು ರೋಧಿಸುತ್ತಿರುವ ಪೋಷಕರು 
ರಾಜ್ಯ

ವಿದ್ಯಾವಾರಿಧಿ ಶಾಲೆ ದುರಂತ:ಮೃತ ಮಕ್ಕಳು ಸೇವಿಸಿದ್ದ ಸಾರಿನಲ್ಲಿ ಕೀಟನಾಶಕ ಮಿಶ್ರಣ?

ವಿದ್ಯಾವಾರಿಧಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ಸಾವಿಗೀಡಾದ ಪ್ರಕರಣ ಸಂಬಂಧ ಸಾಂಬಾರಿನಲ್ಲಿ ಕೀಟನಾಶಕ ಬಳಸಿರುವ ಶಂಕೆ...

ತುಮಕೂರು: ವಿದ್ಯಾವಾರಿಧಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ಸಾವಿಗೀಡಾದ ಪ್ರಕರಣ ಸಂಬಂಧ ಸಾಂಬಾರಿನಲ್ಲಿ ಕೀಟನಾಶಕ ಬಳಸಿರುವ ಶಂಕೆ ವ್ಯಕ್ತವಾಗಿದೆ.

ಮೃತ ವಿದ್ಯಾರ್ಥಿಗಲ ಮರಣೋತ್ತರ ಪರೀಕ್ಷೆ ವರದಿ  ಆಧಾರದ ಮೇಲೆ ನಡೆದ ಪ್ರಾಥಮಿಕ ತನಿಖೆಯಿಂದ ಸಾರಿನಲ್ಲಿ ಅಲ್ಯೂಮಿನಿಯಂ ಪ್ರಾಸ್ಪೇಟ್ ಎಂಬ ಕೀಟನಾಶಕ ಬೆರೆಸಲಾಗಿತ್ತು ಎಂದು ತಿಳಿದು ಬಂದಿದೆ.

ರಸಾಯನಿಕ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಇದನ್ನು ಸುಲಭವಾಗಿ ಖರೀದಿಸಬಹುದಾಗಿದೆ. ವೈದ್ಯರ ತಂಡ ಈ ರೀತಿಯ ರಾಸಾಯನಿಕ ವಸ್ತುವನ್ನು ಹುಳಿಯಾರುವಿನ ಅಂಗಡಿಗಳಿಂದ ಸಂಗ್ರಹಿಸಿದೆ.

ರೈತರು ಈ ಕೀಟನಾಶಕವನ್ನು ಧಾನ್ಯಗಳ ಚೀಲದಲ್ಲಿ ಹಾಕಿಡುತ್ತಾರೆ ಎಂದು ಡಾಯ ರಂಗಸ್ವಾಮಿ ಹೇಳಿದ್ದಾರೆ.ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರುವವರೆಗೂ ನಾವು ಯಾವುದೇ ನಿರ್ಧಾರಕ್ಕೆ ಬರಲಾಗಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಹುಳಿಯಾರಿನ ವಿದ್ಯಾವಾರಿಧಿ ಇಂಟರ್‌ನ್ಯಾಷನಲ್‌ ಶಾಲೆಯ ವಿದ್ಯಾರ್ಥಿಗಳ ಪೋಷಕರು ಹಾಗೂ ಕಾಯಿ ತಿಮ್ಮನಹಳ್ಳಿ ಗ್ರಾಮಸ್ಥರು ಶಾಲೆಯ ಆವರಣದಲ್ಲಿ  ದಿಢೀರ್‌ ಪ್ರತಿಭಟನೆ ನಡೆಸಿದರು. ಪ್ರಕರಣದ ಬಳಿಕ ಶಾಲೆಗೆ ರಜೆ ಘೋಷಿಸಲಾಗಿತ್ತು. ಬೆಳಿಗ್ಗೆ ಶಾಲೆ ಪುನಾರಂಭಗೊಂಡಿತ್ತು. ಪ್ರತಿಭಟನೆಯಿಂದಾಗಿ ಶಾಲೆಯ ಮುಂಭಾಗ ಉದ್ವಿಗ್ನ ವಾತಾವರಣ ಕಂಡುಬಂತು. ಶಾಲೆಯ ಮಾಲೀಕರಾದ ಕಿರಣ್‌ಕುಮಾರ್‌, ಕವಿತಾ ಸ್ಥಳಕ್ಕೆ ಬಂದು ನಮ್ಮ ಪ್ರಶ್ನೆಗಳಿಗೆ ಉತ್ತರ ಹೇಳಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ರಾತ್ರಿವರೆಗೂ ಪ್ರತಿಭಟನೆ ಮುಂದುವರೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT