ದಿಶಾ ಚೌಧರಿ ಮತ್ತು ಸಚಿನ್ ನಾಯಕ್ 
ರಾಜ್ಯ

ಡ್ರೀಮ್ಸ್ ಜಿಕೆ, ಟಿಜಿಎಸ್ ಗ್ರೂಪ್ ನಿಂದ ವಂಚನೆ: ಸಿಐಡಿ ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ

ಫ್ಲ್ಯಾಟ್ ಹಾಗೂ ನಿವೇಶನ ನೀಡುವುದಾಗಿ ನೂರಾರು ಜನರಿಂದ ಹಣ ಪಡೆದು ವಂಚನೆ ಮಾಡಿರುವ ಟಿಜಿಎಸ್ ರಿಯಲ್ ಎಸ್ಟೇಟ್ ಗ್ರೂಪ್ ..

ಬೆಂಗಳೂರು: ಫ್ಲ್ಯಾಟ್ ಹಾಗೂ ನಿವೇಶನ ನೀಡುವುದಾಗಿ ನೂರಾರು ಜನರಿಂದ ಹಣ ಪಡೆದು ವಂಚನೆ ಮಾಡಿರುವ ಟಿಜಿಎಸ್ ರಿಯಲ್ ಎಸ್ಟೇಟ್ ಗ್ರೂಪ್ ಮತ್ತು ಡ್ರೀಮ್ಸ್ ಜಿ.ಕೆ  ಕಂಪನಿ ಮಾಲೀಕ ಸಚಿನ್ ನಾಯಕ್ ನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
ಗ್ರಾಹಕರಿಗೆ ನೂರಾರು ಕೋಟಿ ಹಣ ವಂಚಿಸಿರುವ ಆರೋಪದ ಮೇಲೆ ಸಚಿನ್ ನಾಯಕ್ ನನ್ನು ಸೋಮವಾರ ಬಂಧಿಸಲಾಗಿದೆ, 2016 ರ ಡಿಸೆಂಬರ್ ನಲ್ಲಿ ಸಚಿನ್ ನಾಯಕ್ ಮತ್ತು ಆತನ ಪತ್ನಿ ದಿಶಾ ಚೌಧರಿ, ಹಾಗೂ ಕಂಪನಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಬಂಧಿಸಲಾಗಿತ್ತು.
ಕೆಲ ಸಮಯದ ನಂತರ ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದರು. ಇದೇ ವೇಳೆ 2 ಸಾವಿರ ಮಂದಿಗೆ ವಂಚನೆ ಮಾಡಿರುವ ಟಿಜಿಎಸ್ ಕನ್ ಸ್ಟ್ರಕ್ಷನ್, ಡ್ರೀಮ್ಸ್ ಜಿ.ಕೆ . ಟಿಜಿಎಸ್ ರಿಯಲ್ ಎಸ್ಟೇಟ್,  ಸೆಂಡ್ ಮೈ ಗಿಫ್ಟ್, ಡೈಲಿ ಪೂಜಾ.ಕಾಮ್ ಮತ್ತು ಗೃಹ ಕಲ್ಯಾಣ ಕಂಪನಿಗಳ ವಿರುದ್ಧ ಸಿಐಡಿ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಸಚಿನ್ ನಾಯಕ್ ನಡೆಸುತ್ತಿದ್ದ ಈ ಕಂಪನಿಗಳಿಗೆ  ಆತನ ಪತ್ನಿ ದಿಶಾ ಚೌಧರಿ  ಸಿಇಓ ಆಗಿ ನೇಮಕಗೊಂಡಿದ್ದಳು. ಸಾವಿರಾರು ಗ್ರಾಹಕರಿಂದ ನೂರಾರು ಕೋಟಿ ಹಣವನ್ನು ಮುಂಗಡವಾಗಿ ಪಡೆದಿದ್ದ ಸಚಿನ್ ನಾಯಕ್ ಅವರಿಗೆ ಪ್ಲ್ಯಾಟ್ ಗಳನ್ನು ನೀಡಿರಲಿಲ್ಲ, ಹೆಚ್ ಎಸ್ ಆರ್ ಲೇಔಟ್,  ಬೆಳ್ಳಂದೂರು, ಆನೇಕಲ್,  ಮತ್ತು ಎಲಕ್ಟ್ರಾನಿಕ್ ಸಿಟಿಗಳಲ್ಲಿ ನಿರ್ಮಾಣ ಹಂತದ ಕಟ್ಟಡಗಳನ್ನು ತೋರಿಸಿ ಅನಿವಾಸಿ ಭಾರತೀಯರು ಸೇರಿದಂತೆ ಹಲವು ಮಂದಿಗೆ ವಂಚಿಸಿದ್ದನು. ಪ್ರಕರಣ ಸಿಐಡಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಆತನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ಬೆಳಗ್ಗೆ 10 ಗಂಟೆಗೆ ಆನಂದ್ ರಾವ್ ಸರ್ಕಲ್ ನಲ್ಲಿ ಜಮಾಯಾಸಿದ್ದ ಸುಮಾರು 1000 ಕ್ಕೂ ಹೆಚ್ಚು ಜನ ವಂಚಕ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.ಜೊತೆಗೆ ಗೃಹ ಸಚಿವರನ್ನು ಭೇಟಿ ಮಾಡಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT