ಕೊಲೆಯಾದ ವಾಸು ಮತ್ತು ಬಂಧಿತ ಆರೋಪಿಗಳು 
ರಾಜ್ಯ

ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಬೊಮ್ಮಸಂದ್ರ ಪುರಸಭೆ ಸದಸ್ಯೆ ಸೇರಿ ನಾಲ್ವರ ಬಂಧನ

: ಹೊಸೂರು ರಸ್ತೆಯ ಬಿಟಿಎಲ್ ಕಾಲೇಜು ಬಳಿ ನಡೆದಿದ್ದ ಬೊಮ್ಮಸಂದ್ರ ಪುರಸಭೆಯ ಬಿಜೆಪಿ ಸದಸ್ಯ ಶ್ರೀನಿವಾಸ ಪ್ರಸಾದ್ ಅಲಿಯಾಸ್ ವಾಸು (43) ಕೊಲೆ ರಹಸ್ಯ ...

ಬೆಂಗಳೂರು: ಹೊಸೂರು ರಸ್ತೆಯ ಬಿಟಿಎಲ್ ಕಾಲೇಜು ಬಳಿ ನಡೆದಿದ್ದ ಬೊಮ್ಮಸಂದ್ರ ಪುರಸಭೆಯ ಬಿಜೆಪಿ ಸದಸ್ಯ ಶ್ರೀನಿವಾಸ ಪ್ರಸಾದ್ ಅಲಿಯಾಸ್ ವಾಸು (43) ಕೊಲೆ ರಹಸ್ಯ ಬಯಲಾಗಿದ್ದು, ಪುರಸಭೆ ಕಾಂಗ್ರೆಸ್ ಸದಸ್ಯೆ ಸರೋಜಮ್ಮ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಸರೋಜಮ್ಮ (45) ಆನೇಕಲ್‌ನ ಬನಹಳ್ಳಿ ಗ್ರಾಮದವರು. ಅವರ ಜತೆ ಸಿಂಗೇನ ಅಗ್ರಹಾರದ ಮಧು ಅಲಿಯಾಸ್ ಸ್ಟ್ರೈಕ್ (23), ರಾಂಪುರದ ನಾರಾಯಣಸ್ವಾಮಿ (35), ಮುರಳಿ (20) ಹಾಗೂ ಕರ್ಪೂರಿನ ಸಿ.ಮಂಜುನಾಥ (29) ಎಂಬುವರನ್ನು ಬಂಧಿಸಲಾಗಿದೆ.
ಪ್ರಕರಣ ಪ್ರಮುಖ ಆರೋಪಿ ಸರೋಜಮ್ಮ ಅವರ ಮಗ ಆರ್.ಮಂಜುನಾಥ್ ತಲೆಮರೆಸಿಕೊಂಡಿದ್ದಾನೆ. ಮಂಜುನಾಥ್ ಅಲಿಯಾಸ್ ಜಿಮ್ ಮಂಜನ ಬಂಧನವಾದರೇ ಕೊಲೆಗೆ ಏನು ಕಾರಣ ಎಂಬುದನ್ನು ತಿಳಿದುಕೊಳ್ಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ವಾಸು ಅವರ ಹತ್ಯೆ ಪೂರ್ವ ನಿಯೋಜಿತ ಕೃತ್ಯವಾಗಿದೆ. ಇದರ ಹಿಂದೆ ಸ್ಥಳೀಯ ರಾಜಕಾರಣಿಗಳ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ನಂತರ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಶ್ರೀನಿವಾಸ್ ಪ್ರಸಾದ್ ಅವರ ಹತ್ಯೆಗೆ ಹಣ ನೀಡಿದವರು ಯಾರು ಎಂಬುದರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT