ಪ್ರೊ.ನರೇಂದ್ರ ನಾಯ್ಕ್ 
ರಾಜ್ಯ

ಮತ್ತೋರ್ವ ವಿಚಾರವಾದಿ ಹತ್ಯೆಗೆ ಸಂಚು; ಮಂಗಳೂರಿನಲ್ಲಿ ನರೇಂದ್ರ ನಾಯಕ್ ಹತ್ಯೆಗೆ ಯತ್ನ!

ಖ್ಯಾತ ವಿಚಾರವಾದಿ ಪ್ರೊಫೆಸರ್ ನರೇಂದ್ರ ನಾಯಕ್ ಅವರ ಹತ್ಯೆಗೆ ಯತ್ನ ನಡೆಸಿರುವ ಘಟನೆ ಮಂಗಳೂರಿನ ಉರ್ವದಲ್ಲಿ ನಡೆದಿದೆ ಎಂದುತಿಳಿದುಬಂದಿದೆ.

ಮಂಗಳೂರು: ಖ್ಯಾತ ವಿಚಾರವಾದಿ ಪ್ರೊಫೆಸರ್ ನರೇಂದ್ರ ನಾಯಕ್ ಅವರ ಹತ್ಯೆಗೆ ಯತ್ನ ನಡೆಸಿರುವ ಘಟನೆ ಮಂಗಳೂರಿನ ಉರ್ವದಲ್ಲಿ ನಡೆದಿದೆ ಎಂದುತಿಳಿದುಬಂದಿದೆ.

ಈ ಬಗ್ಗೆ ಸ್ವತಃ ಪ್ರೊ.ನರೇಂದ್ರ ನಾಯಕ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ನಿನ್ನೆ "ಕಾರಿನಲ್ಲಿ ತೆರಳುತ್ತಿದ್ದ ವೇಳೆ ಇಬ್ಬರು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಸರ್..ಟೈರ್ ಪಂಚರ್ ಆಗಿದೆ ಎಂದು ಕಾರು  ನಿಲ್ಲಿಸಲು ಪ್ರಯತ್ನಿಸಿದ್ದರು. ಅಪಾಯದ ಮುನ್ಸೂಚನೆ ಅರಿತ ನಾನು ಕಾರು ನಿಲ್ಲಿಸದೆ ಪ್ರಯಾಣಿಸಿದೆ ಎಂದು ಹೇಳಿದ್ದಾರೆ.

ಪ್ರೊ.ನರೇಂದ್ರ ನಾಯಕ್ ಅವರು ವಿನಾಯಕ ಬಾಳಿಗ ಹತ್ಯೆ ಪ್ರಕರಣ ಸಂಬಂಧ ನಡೆಯುತ್ತಿರುವ ಹೋರಾಟದ ಮುಂಚೂಣಿ ಹೋರಾಟಗಾರರಾಗಿದ್ದು, ಹೋರಾಟದಿಂದ ಹಿಂದೆ ಸರಿಯುವಂತೆ ಹಲವರು ಒತ್ತಡ ಹೇರಿದ್ದರು. ಹೀಗಾಗಿ  ಮುಂಜಾಗ್ರತಾ ಕ್ರಮವಾಗಿ ನರೇಂದ್ರ ನಾಯಕ್ ಅವರಿಗೆ ಓರ್ವ ಗನ್ ಮ್ಯಾನ್ ಅನ್ನು ಪೊಲೀಸ್ ಇಲಾಖೆ ಒದಗಿಸಲಾಗಿತ್ತು. ಆದರೆ ನಿನ್ನೆ ಗನ್ ಮನ್ ಇಲ್ಲದೇ ನರೇಂದ್ರ ನಾಯಕ್ ಅವರು ಹೊರಗೆ ಬಂದಿದ್ದು, ಈ ವಿಚಾರ ತಿಳಿದ ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ.

ಈ ವೇಳೆ ಮಾರ್ಗ ಮಧ್ಯೆ ಟೈರ್ ಪಂಚರ್ ಆಗಿದೆ ಎಂದು ಸುಳ್ಳು ಹೇಳಿದ ದುಷ್ಕರ್ಮಿಗಳು ಅವರ ಕಾರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಅಪಾಯ ಮುನ್ಸೂಚನೆ ಅರಿತ ನರೇಂದ್ರ ನಾಯಕ್ ಅವರು ಕಾರು ನಿಲ್ಲಿಸದೇ ಮುಂದೆ  ಹೋಗಿ ಪೆಟ್ರೋಲ್ ಬಂಕ್ ನವರಿಂದ ಕಾರು ಚತ್ರ ಪಂಚರ್ ಆಗಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಿದ್ದಾರೆ. ಬಳಿಕ ದುಷ್ಕರ್ಮಿಗಳ ಸಂಚು ಬಯಲಾಗಿದ್ದು, ಇಂದು ನರೇಂದ್ರ ನಾಯಕ್ ಅವರು ಉರ್ವ ಪೊಲೀಸ್ ಠಾಣೆಯಲ್ಲಿ ಈ  ಸಂಬಂಧ ದೂರು ನೀಡಿದ್ದಾರೆ.

ರಾಜ್ಯದಲ್ಲಿ ವಿಚಾರವಾದಿ ಎಂಎಂ ಕಲ್ಬುರ್ಗಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಇನ್ನೂ ಹಸಿರಾಗಿರುವಾಗಲೇ ಇದೀಗ ಮತ್ತೊಬ್ಬ ವಿಚಾರವಾದಿ ನರೇಂದ್ರ ನಾಯಕ್ ಅವರನ್ನು ದುಷ್ಕರ್ಮಿಗಳು  ಗುರಿಯಾಗಿಸಿಕೊಂಡಿರುವ ಸಾಧ್ಯತೆ ಇದೆ. ಇನ್ನು ಕೆಲವೇ ದಿನಗಳಲ್ಲಿ ವಿನಾಯಕ್ ಬಾಳಿಗಾ ಹತ್ಯೆಗೆ ವರ್ಷ ತುಂಬಲಿದ್ದು, ಅಷ್ಟರೊಳಗೇ ತಮ್ಮ ಕೊಲೆಗೆ ಸಂಚು ರೂಪಿಸಿರಬಹುದು ಎಂದು ನರೇಂದ್ರ ನಾಯಕ್ ಶಂಕೆ ವ್ಯಕ್ತಪಡಿಸಿದ್ದಾರೆ.

ನರೇಶ್ ಶೆಣೈ ಗ್ಯಾಂಗ್ ಮೇಲೆ ಶಂಕೆ
ಇದೇ ವೇಳೆ ಪ್ರೊ. ನರೇಂದ್ರ ನಾಯಕ್ ಅವರ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ನರೇಶ್ ಶೆಣೈ ಗ್ಯಾಂಗ್ ಮೇಲೆ ಅನುಮಾನ ವ್ಯಕ್ತಪಡಿಸಲಾಗುತ್ತಿದೆ. ವಿನಾಯಕ ಬಾಳಿಗ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನರೇಶ್ ಶೆಣೈ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT