ಸಂಸದ ಪ್ರತಾಪ್ ಸಿಂಹ ಅವರ ಸ್ಪಷ್ಟನೆ 
ರಾಜ್ಯ

ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತ ಪೋಸ್ಟ್ ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ

ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಪ್ರತಿಕ್ರಿಯೆಯಿಂದ ಸುದ್ದಿಯಾಗಿದ್ದ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತ ಫೇಸ್ ಬುಕ್ ಪೋಸ್ಟ್ ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಪ್ರತಿಕ್ರಿಯೆಯಿಂದ ಸುದ್ದಿಯಾಗಿದ್ದ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತ ಫೇಸ್ ಬುಕ್ ಪೋಸ್ಟ್ ಗೆ  ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.  
ಖಾಸಗಿ ಮಾಧ್ಯಮವೊಂದರ ವರದಿಯನ್ನಷ್ಟೇ ತಮ್ಮ ಫೇಸ್ ಬುಕ್ ನ ಪೋಸ್ಟ್ ನಲ್ಲಿ ಅಪ್ ಡೇಟ್ ಮಾಡಿದ್ದಾಗಿ ಸಂಸದರು ಸ್ಪಷ್ಟನೆ ನೀಡಿದ್ದು, ರೂಪಾ ಮೌದ್ಗೀಲ್ ಅವರು  ಅದನ್ನು ಓದಲು ಸ್ವಲ್ಪ ಸಮಯ ವ್ಯಯಿಸಲಿ ಎಂದು ಹೇಳಿದ್ದಾರೆ. ಕರ್ನಾಟಕದಿಂದ ಕೇಂದ್ರ ಸೇವೆಗೆ ನಿಯೋಜನೆಗೊಂಡಿರುವ ಐಪಿಎಸ್ ಅಧಿಕಾರಿಗಳ ಬಗ್ಗೆ  ಪಬ್ಲಿಕ್ ಟಿವಿ ಸುದ್ದಿ ವಾಹಿನಿಯ ವೆಬ್ ಸೈಟ್ ನಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಯನ್ನು ಸಂಸದ ಪ್ರತಾಪ್ ಸಿಂಹ ಅವರು ಫೇಸ್ ಬುಕ್ ನಲ್ಲಿ ರಿಪೋಸ್ಟ್ ಮಾಡಿದ್ದರು. 
ರಿಪೋಸ್ಟ್ ಗೆ ಪ್ರತಿಕ್ರಿಯೆ ನೀಡಿದ್ದ ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಅಧಿಕಾರಿಗಳು ಅವರ ಕೆಲಸ ಮಾಡಲು ಬಿಡಿ, ರಾಜಕೀಯದಿಂದ ಅಧಿಕಾರಿಗಳನ್ನು ದೂರವಿರಿಸಿ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಂಸದ ಪ್ರತಾಪ್ ಸಿಂಹ, "ವರದಿಯನ್ನಷ್ಟೇ ನನ್ನ ಫೇಸ್ ಬುಕ್ ನ ಪೋಸ್ಟ್ ನಲ್ಲಿ ರೀಪೊಸ್ಟ್ ಮಾಡಿದ್ದೇನೆ ನಿಮಗೆ ಬಿಡುವಿದ್ದರೆ ಅದನ್ನು ಓದಿ" ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT