ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಖಾಸಗಿ ಕಾಲೇಜು ವಿರುದ್ಧ ವಂಚನೆ ಕೇಸು ದಾಖಲು

ಪದವಿ ಸರ್ಟಿಫಿಕೇಟ್ ನೀಡುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆ ಆಕಾಶ್...

ಬೆಂಗಳೂರು: ಪದವಿ ಸರ್ಟಿಫಿಕೇಟ್ ನೀಡುವುದಾಗಿ ನಂಬಿಸಿ  ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆ ಆಕಾಶ್ ಇಂಟರ್ ನ್ಯಾಷನಲ್ ಮ್ಯಾನೇಜ್ ಮೆಂಟ್ ವಿರುದ್ಧ ಕೇಸು ದಾಖಲಾಗಿದೆ. 
ಬೆಂಗಳೂರು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಈ ಕಾಲೇಜಿನ ಆಡಳಿತ ವಿಭಾಗದ ಸದಸ್ಯ ಸಾದಿಕ್ ಜಾಫರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಧ್ಯೆ ಸಂಸ್ಥೆಯ ಮುಖ್ಯಸ್ಥ ಸಹ್ನ್ವಾಜ್ ಮತ್ತು ಟ್ರಸ್ಟಿ ಸರ್ಫರಾಜ್ ಇಸ್ಮಾಯಿಲ್ ತಲೆಮರೆಸಿಕೊಂಡಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು  ಪ್ರಕಟಿಸದಿದ್ದರಿಂದ ವಿದ್ಯಾರ್ಥಿಗಳು ಬೆಂಗಳೂರು ವಿಶ್ವ ವಿದ್ಯಾಲಯವನ್ನು ಸಂಪರ್ಕಿಸಿದ್ದರು. ಕಾಲೇಜು ನಕಲಿ ದಾಖಲೆಗಳನ್ನು ಸಲ್ಲಿಸಿರುವುದರಿಂದ ಫಲಿತಾಂಶ ಪ್ರಕಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
ಬಿ.ಕಾಂ, ಬಿಸಿಎ, ಬಿಬಿಎಂ ಮತ್ತು ಕಾಲೇಜಿನ ಉಪನ್ಯಾಸಕರು ಬೆಂಗಳೂರು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಪ್ರೊ.ಕೆ.ಎ.ಲಿಂಗೇ ಗೌಡ ಅವರನ್ನು ಭೇಟಿ ಮಾಡಿ ತಮ್ಮ ಮೂಲ ಅಂಕಪಟ್ಟಿಯನ್ನು ಹಿಂತಿರುಗಿಸುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT