ಎಸ್.ಎಂ.ಕೃಷ್ಣ 
ರಾಜ್ಯ

ಎಸ್.ಎಂ.ಕೃಷ್ಣ, ಅಮಿತ್ ಶಾ ಭೇಟಿ ಇಂದು: ವಾರದೊಳಗೆ ಬಿಜೆಪಿ ಸೇರ್ಪಡೆ ಸಾಧ್ಯತೆ

ಹಿರಿಯ ರಾಜಕೀಯ ನಾಯಕ ಎಸ್.ಎಂ.ಕೃಷ್ಣ ಅವರು ಸೋಮವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಸಾ ಅವರನ್ನು ಭೇಟಿ ಮಾಡಲಿದ್ದು, ವಾರದೊಳಗಾಗಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆಂದು...

ಬೆಂಗಳೂರು: ಹಿರಿಯ ರಾಜಕೀಯ ನಾಯಕ ಎಸ್.ಎಂ.ಕೃಷ್ಣ ಅವರು ಸೋಮವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಸಾ ಅವರನ್ನು ಭೇಟಿ ಮಾಡಲಿದ್ದು, ವಾರದೊಳಗಾಗಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆಂದು ಮೂಲಗಳು ತಿಳಿಸಿವೆ.
ಇಂದು ನವದೆಹಲಿಗೆ ತೆರಳಲಿರುವ ಎಸ್.ಎಂ.ಕೃಷ್ಣ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಭೇಟಿ ವೇಳೆ ಬಿಜೆಪಿ ಸೇರ್ಪಡೆ ದಿನಾಂಕವನ್ನು ಅಂತಿಮಗೊಳಿಸಲಿದ್ದಾರೆಂದು ಹೇಳಲಾಗುತ್ತಿದೆ. 
ಇನ್ನು ಕೃಷ್ಣ ಬಿಜೆಪಿ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಹಾಗೂ ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ್ ಅವರು, ಕೃಷ್ಣ ಅವರನ್ನು ಬಿಜೆಪಿ ಸೇರ್ಪಡೆಗೊಳಿಸಿಕೊಳ್ಳದಂತೆ ಅಮಿತ್, ಪ್ರಧಾನಿ ಮೋದಿ ಮತ್ತು ಅರುಣ್ ಜೇಟ್ಲಿಯವರಿಗೆ ಪತ್ರವನ್ನು ಬರೆದಿದ್ದಾರೆ. 
ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕೃಷ್ಣ ಅವರು ಹಲವು ಅಕ್ರಮಗಳನ್ನು ಭಾಗಿಯಾಗಿದ್ದಾರೆ. ಅಳಿಯ ಸಿದ್ಧರ್ಥ್ ಅವರು ಅಕ್ರಮ ಆಸ್ತಿ ಗಳಿಸಲು ಸಹಾಯ ಮಾಡಿದ್ದಾರೆ. ಪ್ರಧಾನಿ ಮೋದಿಯವರು ಭ್ರಷ್ಟಾಚಾರ ಹಾಗೂ ಕಪ್ಪುಹಣದ ವಿರುದ್ಧ ಹೋರಾಟ ನಡೆಸುತ್ತಿದ್ದು, ಹೀಗಾಗಿ ಕೃಷ್ಣ ಅವರನ್ನು ಬಿಜೆಪಿ ತನ್ನ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

IPL 2026: RCB ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಬಗ್ಗೆ ಮೌನ ಮುರಿದ MI; ಹೇಳಿದ್ದೇನು?

ಬಂಗಾಳ ಸಿಎಂ ಸುವೇಂದು ಆಪ್ತನ ಕೊಲೆ ಪ್ರಕರಣ: UPI ಪಾವತಿಯಿಂದ ಮಹತ್ವದ ಸುಳಿವು; ಮೂವರ ಬಂಧನ

ಕಾಂಗ್ರೆಸ್ ಊಸರವಳ್ಳಿಗಿಂತ ಬೇಗ ಬಣ್ಣ ಬದಲಿಸುತ್ತೆ: ಶಶಿ ತರೂರ್ ಎದುರೇ ಅಣ್ಣಾಮಲೈ ತೀವ್ರ ಟೀಕೆ- ಪ್ರತಿಕ್ರಿಯೆ ಏನು?| video

ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ: ಬೆಂಗಳೂರಿಗೆ ದೌಡಾಯಿಸಿದ NIA, ಓರ್ವ ಆರೋಪಿಯ ಬಂಧನ!

SCROLL FOR NEXT