ಪ್ರತಿಭಟನಾಕಾರರು 
ರಾಜ್ಯ

ಸಿಎಂ ಸಭೆ ವಿಫಲ: ಮುಂದುವರಿದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ವೇತನ ಹೆಚ್ಚಳ ಬೇಡಿಕೆ ಈಡೇರುವವರೆಗೆ ತಮ್ಮ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಅಂಗನವಾಡಿ ...

ಬೆಂಗಳೂರು: ವೇತನ ಹೆಚ್ಚಳ ಬೇಡಿಕೆ ಈಡೇರುವವರೆಗೆ ತಮ್ಮ  ಪ್ರತಿಭಟನೆ ನಿಲ್ಲಿಸುವುದಿಲ್ಲ  ಎಂದು ಅಂಗನವಾಡಿ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಕೈಬಿಡದಿರಲು ನಿರ್ಧರಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಸಂಘದ ಮುಖಂಡರ ಜೊತೆ ನಡೆಸಿದ ಮಾತುಕತೆ ವೇಳೆ ಯಾವುದೇ ನಿರ್ಧಾರಕ್ಕೆ ಬರುವಲ್ಲಿ ವಿಫಲರಾಗಿದ್ದಾರೆ.

ಮುಂದಿನ ತಿಂಗಳು 19ರಂದು ಸಭೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷಿಗೆ ಭರವಸೆ ನೀಡಿದ್ದು, ತಮ್ಮ ಬೇಡಿಕೆ ಈಡೇರುವವರೆಗೂ ಧರಣಿ ವಾಪಸ್ ಇಲ್ಲ ಎಂದು ಸಂಘದ ಮುಖ್ಯಸ್ಥೆ ವರಲಕ್ಷಿ ಘೋಷಿಸಿದ್ದಾರೆ.

ಇನ್ನೊಂದೆಡೆ ಇಂದು ಸದನದಲ್ಲಿ ಕಲಾಪದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯಕರ್ತರಿಗೆ ಸಂಭಾವನೆ ಹೆಚ್ಚಿಸಬೇಕಾದರೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದು ಕೇಂದ್ರ ಸರ್ಕಾರದ ಅನುದಾನ ಕಾರ್ಯಕ್ರಮವಾದರೂ ಕಳೆದ ವರ್ಷ ಅನುದಾನವನ್ನು ಶೇಕಡ ೯೦ರಿಂದ ೪೦ಕ್ಕೆ ಇಳಿಸಿದೆ ಎಂದು ಅವರು ತಿಳಿಸಿದರು. ಆದರೂ ಸಹ ಸರ್ಕಾರ ಅನೇಕ ವರ್ಷಗಳಿಂದ ಸಂಭಾವನೆಯನ್ನು ಹೆಚ್ಚಿಸುತ್ತಲೇ ಬಂದಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ನ್ಯಾಯಯುತವಾಗಿದೆ; ಅದನ್ನು ಈಡೇರಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.

ಈ ಬಗ್ಗೆ ಸದನಕ್ಕೆ ಹೇಳಿಕೆ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಉಮಾಶ್ರೀ, ಅಂಗನವಾಡಿ ಕಾರ್ಯಕರ್ತರಿಗೆ ಮಾಸಿಕ 7 ಸಾವಿರ ರೂಪಾಯಿ ಸಂಭಾವನೆ ನೀಡಲಾಗುತ್ತಿದೆ. ಇದನ್ನು 10 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಅವರು ಬೇಡಿಕೆ ಸಲ್ಲಿಸಿದ್ದಾರೆ ಎಂದರು. ಅಂಗನವಾಡಿ ಕಾರ್ಯಕರ್ತರಿಗೆ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿಗಳು ತಕ್ಷಣ ಎಲ್ಲಾ ಕ್ರಮ ಕೈಗೊಳ್ಳುತ್ತಾರೆ ಎಂದು ಆಶ್ವಾಸನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT