ಸಾಂದರ್ಭಿಕ ಚಿತ್ರ 
ರಾಜ್ಯ

ಮಹಾರಾಣಿ ಕಾಲೇಜಿನ ಹಾಸ್ಟೆಲ್ ಆವರಣದಲ್ಲಿ ಅಪರಿಚಿತ ವ್ಯಕ್ತಿ ಓಡಾಟ: ಭೀತಿಯಲ್ಲಿ ವಿದ್ಯಾರ್ಥಿನಿಯರು

ಮಹಾರಾಣಿ ಕಾಲೇಜಿನ ಹಾಸ್ಟೆಲ್ ಆವರಣಕ್ಕೆ ರಾತ್ರಿ ಹೊತ್ತಿನಲ್ಲಿ ಬೆತ್ತಲೆಯಾಗಿ ವ್ಯಕ್ತಿಯೊಬ್ಬ ಬರುವುದು ನಿನ್ನೆ ಸದನದಲ್ಲಿ...

ಬೆಂಗಳೂರು: ಮಹಾರಾಣಿ ಕಾಲೇಜಿನ ಹಾಸ್ಟೆಲ್  ಆವರಣಕ್ಕೆ ರಾತ್ರಿ ಹೊತ್ತಿನಲ್ಲಿ ಬೆತ್ತಲೆಯಾಗಿ ವ್ಯಕ್ತಿಯೊಬ್ಬ ಬರುವುದು ನಿನ್ನೆ ಸದನದಲ್ಲಿ ಪ್ರಸ್ತಾಪವಾಯಿತು.
ಕಾಲೇಜು ಮಾತ್ರವಲ್ಲ, ಸುಮಾರು 200 ವಿದ್ಯಾರ್ಥಿನಿಯರು ಉಳಿದುಕೊಳ್ಳುವ ಹಾಸ್ಟೆಲ್ ಕೂಡ ಸುರಕ್ಷಿತವಾಗಿಲ್ಲ. ಅಪರಿಚಿತ ವ್ಯಕ್ತಿಯೊಬ್ಬ ಹಾಸ್ಟೆಲ್ ನ ಆವರಣದಲ್ಲಿ ಆಗಾಗ ಬಂದು ಸುಳಿಯುವುದು, ಇಣುಕುವುದು ಮಾಡುತ್ತಿರುವುದು ವಿದ್ಯಾರ್ಥಿನಿಯರಲ್ಲಿ ಭೀತಿಯನ್ನು ಹುಟ್ಟಿಸಿದೆ. ನಿನ್ನೆ ನಗರದ ಮಹಾರಾಣಿ ಕಾಲೇಜಿನ ಹಾಸ್ಟೆಲ್ ನ ಸಿಸಿಟಿವಿ ಕ್ಯಾಮರಾದಲ್ಲಿ ಹಾಸ್ಟೆಲ್ ನ ಹಿಂದುಗಡೆ ವ್ಯಕ್ತಿಯೊಬ್ಬ ಓಡಾಡುತ್ತಿರುವುದು ಪತ್ತೆಯಾಗಿದೆ.ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಲೈಂಗಿಕ ಕಿರುಕುಳ ತಡೆ ತಜ್ಞರ ಸಮಿತಿ ಸದಸ್ಯರಿಗೆ ವಿಡಿಯೋ ತೋರಿಸಲಾಗಿದೆ.
ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ನಿನ್ನೆ ಸದನದಲ್ಲಿ ಮಾತನಾಡಿ ಸಿಸಿಟಿವಿಯಲ್ಲಿ ಬೆತ್ತಲೆ ವ್ಯಕ್ತಿಯೊಬ್ಬ ಹಾಸ್ಟೆಲ್ ಆವರಣದಲ್ಲಿ ರಾತ್ರಿ ವೇಳೆ ಓಡಾಡುತ್ತಾನೆ. ಈ ವಿಷಯವನ್ನು ನಾನು ಈಗಾಗಲೇ ಪೊಲೀಸ್ ಆಯುಕ್ತರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.
ವಿದ್ಯಾರ್ಥಿನಿಯರು ಈ ಹಿಂದೆ ಹಲವು ಬಾರಿ ಪೊಲೀಸರಿಗೆ ದೂರು ನೀಡಿದರೂ ದೂರು ದಾಖಲಿಸಿಕೊಳ್ಳಲಿಲ್ಲವಂತೆ.
ಹಲವು ಸಂದರ್ಭಗಳಲ್ಲಿ ನಮ್ಮ ಬಟ್ಟೆಗಳು ಟೆರೇಸ್ ಮೇಲೆ ಒಣಗಲು ಹಾಕಿದ್ದು ಕಾಣೆಯಾಗಿವೆ. ರೇಸ್ ಕೋರ್ಸ್ ರಸ್ತೆ ಕಡೆಯಿಂದ ಯಾರು ಬೇಕಾದರೂ ನಮ್ಮ ಕ್ಯಾಂಪಸ್ ಪ್ರವೇಶಿಸಬಹುದು. ರಾತ್ರಿ 8 ಗಂಟೆ ಮೇಲೆ ಏನಾದರೂ ತುರ್ತು ಕೆಲಸಗಳಿಗೆ ಹೊರ ಹೋಗಬೇಕೆಂದರೂ ನಮಗೆ ಭೀತಿ ಉಂಟಾಗುತ್ತಿದೆ ಎಂದು ವಿದ್ಯಾರ್ಥಿನಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲೆ ಶಾಂತ ಕುಮಾರಿ ಅವರನ್ನು ಕೇಳಿದಾಗ, ಒಂದು ವರ್ಷದ ಹಿಂದೆ ಇಂತಹ ಘಟನೆ ನಡೆದಿತ್ತು. ಪೊಲೀಸರಿಗೆ ಸಾಕಷ್ಟು ಬಾರಿ ದೂರು ನೀಡಿದ್ದೆವು. ಆದರೆ ಅವರೇನು ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ.
ಈ ಘಟನೆಯಿಂದಾಗಿ ಕೆಲವು ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT