ಸಾಂದರ್ಭಿಕ ಚಿತ್ರ 
ರಾಜ್ಯ

ಮೇಕೆ ಕದಿಯಲು ಯತ್ನ ಆರೋಪ: ತುಮಕೂರಿನಲ್ಲಿ ದಲಿತ ವ್ಯಕ್ತಿಗೆ ಥಳಿಸಿ ಹತ್ಯೆ

ಮೇಕೆ ಕದಿಯಲು ಯತ್ನಿಸಿದನೆಂಬ ಆರೋಪದ ಮೇಲೆ ಹಲ್ಲೆ ಮಾಡಿದ ಪರಿಣಾಮ ವ್ಯಕ್ತಿಯೋರ್ವ ಮೃತ ಪಟ್ಟಿರುವ ಘಟನೆ ತುಮಕೂರಿನಲ್ಲಿ ...

ತುಮಕೂರು: ಮೇಕೆ ಕದಿಯಲು ಯತ್ನಿಸಿದನೆಂಬ ಆರೋಪದ ಮೇಲೆ ಹಲ್ಲೆ ಮಾಡಿದ ಪರಿಣಾಮ ವ್ಯಕ್ತಿಯೋರ್ವ ಮೃತ ಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಜಿಲ್ಲೆಯ ಮಧುಗಿರಿ ತಾಲೂಕಿನ ಜೋಗೇನಹಳ್ಳಿಯಲ್ಲಿ ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, ಕೃಷ್ಣಪ್ಪ ಎಂಬಾತ ಸಾವನ್ನಪ್ಪಿದ್ದಾನೆ. ಕೃಷ್ಣಪ್ಪ ಆಂಧ್ರ ಪ್ರದೇಶದ ಮಡಕಾ ಶಿರಾ ತಾಲೂಕಿನ ಮಣ್ಣೂರು ಗ್ರಾಮದವನು ಎಂದು ಗುರುತಿಸಲಾಗಿದೆ.

ಈ ಸಂಬಂಧ ರಾಮರೆಡ್ಡಿ  ಆತನ ಮಗ ಬಾಬು ಮತ್ತು ನಾಗರಾಜ ಎಂಬುವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಕಷ್ಣಪ್ಪ ಮೂವರ ಜೊತೆ ಬೆಳಗಿನ 3 ಗಂಟೆ ವೇಳೆಗೆ ಮೇಕೆ ಕದಿಯಲು ರಾಮರೆಡ್ಡಿ ಮನೆಗೆ ಬಂದಿದ್ದ. ಈ ವೇಳೆ ಎಚ್ಚರಗೊಂಡ ರಾಮರೆಡ್ಡಿ ಮತ್ತಿತ್ತರು ಹೊರ ಬಂದು ನೋಡಿದಾಗ, ಕೃಷ್ಣಪ್ಪ ಮೇಕೆಯನ್ನು ಎಳೆದೊಯ್ಯುತ್ತಿದ್ದದ್ದು ಕಂಡು ಬಂತು.

ಅಪಾಯವನ್ನರಿತ ಕೃಷ್ಣಪ್ಪ ಜೊತೆ ಬಂದಿದ್ದ ಮತ್ತಿಬ್ಬರು ಪರಾರಿಯಾದರು. ಆದರೆ ಕೃಷ್ಣಪ್ಪ ಕತ್ತಲೆಯಲ್ಲಿ ಸಿಕ್ಕಿಬಿದ್ದ. ಮೂವರು ಕೃಷ್ಣಪ್ಪನನ್ನು ಮರಕ್ಕೆ ಕಟ್ಟಿ ಮರದ ತುಂಡುಗಳಿಂದ ಥಳಿಸಿದ್ದಾರೆ.

ಈ ವೇಳೆ ಸ್ಥಳಕ್ಕೆ ಬಂದ ಮಧುಗಿರಿ ಪೊಲೀಸ್ ಇನ್ಸ್ ಪೆಕ್ಟರ್ ನರಸಿಂಹ ಮೂರ್ತಿ ಶವವನ್ನು ವಶಕ್ಕೆ ಪಡೆದಿದ್ದಾರೆ. ಕೃಷ್ಣಪ್ಪ ಸಂಬಂಧಿಕರು ಹಾಗೂ ಕೆಲವು ದಲಿತ ಮುಖಂಡರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೊಡಿಗೆನಹಳ್ಳಿ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT