ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 120 ಪಿಜಿ ಸೀಟುಗಳ ಹೆಚ್ಚಳ

ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಈ ವರ್ಷ ಖುಷಿಪಡುವ...

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಈ ವರ್ಷ ಖುಷಿಪಡುವ ವಿಷಯವೊಂದಿದೆ. ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ರಾಜ್ಯದ ಆಯ್ದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಠ 120 ಅಧಿಕ ಸೀಟುಗಳನ್ನು ಸೇರಿಸಲಾಗಿದೆ.  ಈ ಕುರಿತು ಭಾರತೀಯ ವೈದ್ಯಕೀಯ ಮಂಡಳಿಯಿಂದ ಅಧಿಕೃತ ಮಾಹಿತಿ ಬರುವ ನಿರೀಕ್ಷೆಯಿದೆ.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 38 ಅಧಿಕ ಸೀಟುಗಳು ಲಭ್ಯವಿರುವ ಬಗ್ಗೆ ಈಗಾಗಲೇ ಭಾರತೀಯ ವೈದ್ಯಕೀಯ ಮಂಡಳಿಯಿಂದ ಮಾಹಿತಿ ಬಂದಿದೆ. ಇನ್ನು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೂಡ ಮೂರು ಸೀಟುಗಳಿವೆ ಎನ್ನಲಾಗಿದೆ. ಮುಂದಿನ ಮಾಹಿತಿ ಕಾಲೇಜುಗಳು ಮತ್ತು ಸೀಟು ಲಭ್ಯತೆ ಕುರಿತು ಈ ತಿಂಗಳಾಂತ್ಯದಲ್ಲಿ ತಿಳಿದುಬರಲಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಸಚಿದಾನಂದ ತಿಳಿಸಿದ್ದಾರೆ.
 ವೈದ್ಯಕೀಯ ಶಿಕ್ಷಣ ಲಭ್ಯವಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಹೆಚ್ಚಳ ಮಾಡಲು ಇಲಾಖೆ ಪ್ರಯತ್ನಿಸುತ್ತಿದೆ ಎಂದರು.
ಮೈಸೂರು ವೈದ್ಯಕೀಯ ಶಿಕ್ಷಣ ಸಂಸ್ಥೆ ಮೈಸೂರು, ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಬಳ್ಳಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿ, ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಶಿವಮೊಗ್ಗ ಮತ್ತು ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಸನಗಳಲ್ಲಿ ಸೀಟು ಅಧಿಕವಾಗುವ ಸಾಧ್ಯತೆಯಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಲಭ್ಯತೆಯನ್ನು ಹೆಚ್ಚಿಸಲಾಗುವುದು ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಇದರ ಲಾಭ ದೊರಕಲಿದೆ.
ಪ್ರತಿವರ್ಷ ಕರ್ನಾಟಕದಲ್ಲಿ ವೈದ್ಯಕೀಯ ಶಿಕ್ಷಣ ಅಪೇಕ್ಷಣೀಯರ ಸಂಖ್ಯೆ ಸೀಟು ಲಭ್ಯತೆಗಿಂತ 5 ಪಟ್ಟು ಹೆಚ್ಚಾಗಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT