ಸಾಂದರ್ಭಿಕ ಚಿತ್ರ 
ರಾಜ್ಯ

ಜೆಡಿಎಸ್ ಶಾಸಕ ಪಿಳ್ಳ ಮುನಿಶಾಮಪ್ಪ ಗನ್ ಮ್ಯಾನ್ ರಿವಾಲ್ವರ್ ಕಳ್ಳತನ ಪ್ರಕರಣ: ಇಬ್ಬರ ಬಂಧನ

ದೇವನಹಳ್ಳಿ ಜೆಡಿಎಸ್ ಶಾಸಕ ಪಿಳ್ಳ ಮುನಿಶಾಮಪ್ಪ ಅವರ ಗನ್‌ಮ್ಯಾನ್‌ನಿಂದ ರಿವಾಲ್ವರ್ ಕದ್ದೊಯ್ದಿದ್ದ ಇಬ್ಬರನ್ನು ಯಲಹಂಕ ಪೊಲೀಸರು ...

ಬೆಂಗಳೂರು : ದೇವನಹಳ್ಳಿ ಜೆಡಿಎಸ್ ಶಾಸಕ ಪಿಳ್ಳ ಮುನಿಶಾಮಪ್ಪ ಅವರ ಗನ್‌ಮ್ಯಾನ್‌ನಿಂದ ರಿವಾಲ್ವರ್ ಕದ್ದೊಯ್ದಿದ್ದ ಇಬ್ಬರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಕುಳಾಯಿ ಗ್ರಾಮದ ಧನುಷ್ (19) ಹಾಗೂ ಆಶ್ರಯ ಕಾಲೊನಿಯ ವಿಜಯ್ (21) ಎಂಬುವವರನ್ನು ಬಂಧಿಸಲಾಗಿದೆ.

ಫೆಬ್ರವರಿ 24 ರಂದು ಗನ್ ಮ್ಯಾನ್ ನರಸಿಂಹ ಮೂರ್ತಿ ಉನ್ನಿಕೃಷ್ಣನ್ ರಸ್ತೆಯ ತಿರುಮಲ ಡಾಬಾ ಬಳಿಕುಸಿದು ಬಿದ್ದಿದ್ದರು ಈ ವೇಳೆ ಅವರಿಗೆ ಸಹಾಯ ಮಾಡುವ ನೆಪದಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ನರಸಿಂಹಮೂರ್ತಿ ಅವರಿಂದ ಸರ್ವಿಸ್ ರಿವಾಲ್ವರ್, 2 ಮೊಬೈಲ್‌ಗಳು ಹಾಗೂ 6.5 ಸಾವಿರ ನಗದು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ನರಸಿಂಹ ಮೂರ್ತಿ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಗನ್‌ಮ್ಯಾನ್‌ನಿಂದ ದೋಚಿದ ಮೊಬೈಲ್‌ಗಳನ್ನು ಆರೋಪಿಗಳು ಮಂಗಳೂರಿನ ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದಕ್ಕೆ ಮಾರಾಟ ಮಾಡಿದ್ದರು.  ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿತ್ತು.ಐಎಂಇಐ ಸಂಖ್ಯೆ ಆಧರಿಸಿ  ತನಿಖೆ ಪ್ರಾರಂಭಿಸಿದಾಗ, ಮೊಬೈಲ್ ಯಾವ ಪ್ರದೇಶದಿಂದ ನಿರ್ವಹಣೆಯಾಗುತ್ತಿದೆ ಎಂಬುದು ತಿಳಿಯಿತು. ಮೊಬೈಲ್ ಖರೀದಿಸಿದವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಧನುಷ್‌ನ ವಿವರ ಸಿಕ್ಕಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT