ರಾಜ್ಯ

ಹುಣಸೂರು ಬಳಿ ಭೀಕರ ಅಪಘಾತ, ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವು

Lingaraj Badiger
ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಲ್ಲೂರುಪಾಳ್ಯ ಸಮೀಪ ಕಾರು ಪಲ್ಟಿಯಾಗಿ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಇಂದು ಸಂಜೆ ಹುಣಸೂರಿನ ಹೆಗ್ಗಡೆದೇವನ ಕೋಟೆ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಾಲಕನ ಅತಿ ವೇಗದ ಚಾಲನೆಯಿಂದ ತವೇರಾ ಕಾರು ಪಲ್ಟಿಯಾಗಿ ರಸ್ತೆಯಿಂದ ಕೆಳಗೆ ಉರುಳಿ ಬಿದ್ದಿದೆ. ಮೃತಪಟ್ಟ ವ್ಯಕ್ತಿಗಳು ಬೆಂಗಳೂರು ಹೊಸ್ಕೆರೆಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಹುಣಸೂರು ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
SCROLL FOR NEXT