ಸಂಗ್ರಹ ಚಿತ್ರ 
ರಾಜ್ಯ

ಯುಗಾದಿ ಉಡುಗೊರೆ: ಕಾರ್ಮಿಕರ ನಿವೃತ್ತಿ ವಯಸ್ಸು 60ಕ್ಕೆ ಏರಿಕೆ

ರಾಜ್ಯದ ವಿವಿಧ ಖಾಸಗಿ ವಲಯದ ಕಾರ್ಖಾನೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಅಂಗಡಿಗಳಲ್ಲಿ ಕೆಲಸ ಮಾಡುತ್ತಿರುವ 21 ಲಕ್ಷ ಕಾರ್ಮಿಕರ ಸೇವಾ ನಿವೃತ್ತಿಯ ಅವಧಿಯವನ್ನು 58ರಿಂದ 60ವರ್ಷಕ್ಕೆ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಯುಗಾದಿ ಹಬ್ಬಕ್ಕೆ...

ಬೆಂಗಳೂರು: ರಾಜ್ಯದ ವಿವಿಧ ಖಾಸಗಿ ವಲಯದ ಕಾರ್ಖಾನೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಅಂಗಡಿಗಳಲ್ಲಿ ಕೆಲಸ ಮಾಡುತ್ತಿರುವ 21 ಲಕ್ಷ ಕಾರ್ಮಿಕರ ಸೇವಾ ನಿವೃತ್ತಿಯ ಅವಧಿಯವನ್ನು 58ರಿಂದ 60ವರ್ಷಕ್ಕೆ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಯುಗಾದಿ ಹಬ್ಬಕ್ಕೆ ಉಡುಗೊರೆಯನ್ನು ನೀಡಿದೆ. 
ಕಾರ್ಮಿಕರ ಸೇವಾ ನಿವೃತ್ತಿ ಅವಧಿಯನನ್ನು 68 ವರ್ಷದಿಂದ 60 ವರ್ಷ ಹೆಚ್ಚಳಕ್ಕೆ ಕರ್ನಾಟಕ ಔದ್ಯೋಗಿಕ ಉದ್ಯೋಗಗಳ ನಿಯಮಾವಳಿಗೆ ತಿದ್ದುಪಡಿ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ. 
ರಾಜ್ಯದ 432 ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ 14 ಲಕ್ಷ ಕಾರ್ಮಿಕರು ಮತ್ತು 6,900 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 7 ಲಕ್ಷ ಕಾರ್ಮಿಕರು ಸೇರಿದಂತೆ ಒಟ್ಟು 21 ಲಕ್ಷ ಕಾರ್ಮಿಕರ ವಯೋಮಿತಿ 58 ರಿಂದ 60ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಆದೇಶವನ್ನು ಹೊರಡಿಸಲಿದೆ ಎಂದು ತಿಳಿದುಬಂದಿದೆ. 
ಈಗಾಗಲೇ ಕೇಂದ್ರ ಸರ್ಕಾರ ತನ್ನ ವ್ಯಾಪ್ತಿಯ ಖಾಸಗಿ ವಲಯದ ನೌಕರರ ನಿವೃತ್ತಿ ವಯೋಮಿತಿಯನ್ನು 58 ರಿಂದ 60ಕ್ಕೆ ಹೆಚ್ಚಿಸಿದೆ. ಅದಕ್ಕೆ ಪೂರಕವಾಗಿ ರಾಜ್ಯದಲ್ಲೂ ಈ ಬದಲಾವಣೆ ಮಾಡಲಾಗಿದೆ. ಈಗಾಗಲೇ ಅನೇಕ ಕೈಗಾರಿಕಾ ಸಂಸ್ಥೆಗಳು ವಯೋನಿವೃತ್ತಿಯ ಮಿತಿಯನ್ನು 60ಕ್ಕೆ ಹೆಚ್ಚಿಸಿವೆ. ಸಹಕಾರ ವಲಯದಲ್ಲೂ ಈಗಾಗಲೇ ಈ ತಿದ್ದುಪಡಿ ಮಾಡಿರುವುದರಿಂದ ಖಾಸಗಿ ವಲಯದ ಕಾರ್ಮಿಕರಿಗೂ ಈ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT