ತಿಪ್ಪಗೊಂಡನಹಳ್ಳಿ ಜಲಾಶಯ 
ರಾಜ್ಯ

ಇಸ್ರೇಲ್ ಮೂಲದ ಸಂಸ್ಥೆಯಿಂದ ತಿಪ್ಪಗೊಂಡನಹಳ್ಳಿ ಜಲಾಶಯ ಪುನಶ್ಚೇತನ

ತಿಪ್ಪಗೊಂಡನ ಹಳ್ಳಿಯ ಚಾಮರಾಜ ಸಾಗರ ಜಲಾಶಯ ಪುನಶ್ಚೇತನಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲಮಂಡಳಿಗೆ 10 ಕೋಟಿ...

ಬೆಂಗಳೂರು: ತಿಪ್ಪಗೊಂಡನ ಹಳ್ಳಿಯ ಚಾಮರಾಜ ಸಾಗರ ಜಲಾಶಯ ಪುನಶ್ಚೇತನಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲಮಂಡಳಿಗೆ 10 ಕೋಟಿ ರುಪಾಯಿಯನ್ನು ಬಿಡುಗಡೆ ಮಾಡಿದೆ. 
ಬೆಂಗಳೂರಿನಿಂದ 35 ಕಿ.ಮೀ ದೂರದ ಮಾಗಡಿ ರಸ್ತೆ ಬಳಿ ಇರುವ ತಿಪ್ಪಗೊಂಡನಹಳ್ಳಿ ಜಲಾಶಯ 1933ರಲ್ಲಿ ಪ್ರಾರಂಭವಾಗಿದ್ದು ಅಲ್ಲಿಂದ 2012ರವರೆಗೆ ಬೆಂಗಳೂರು ಜನತೆಗೆ ಕುಡಿಯುವ ನೀರು ಪೂರೈಸುತ್ತಿತ್ತು. 2012ರ ಬಳಿಕ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ನೀರಿನ ಸರಬರಾಜು ನಿಂತುಹೋಗಿತ್ತು. ಇದೀಗ ಈ ಜಲಾಶಯವನ್ನು ಇಸ್ರೇಲ್ ಮೂಲದ ಸಂಸ್ಥೆ ಪುನಶ್ಚೇತನಗೊಳಿಸಲಿದೆ. 
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇತ್ತೀಚೆಗಷ್ಟೇ ಹೆಸರುಘಟ್ಟ ಲೇಕ್ ಮೇಲೆ ಅರಿಯುವ ಅರ್ಕಾವತಿ ಮತ್ತು ತಿಪ್ಪಗೊಂಡನಹಳ್ಳಿ ಜಲಾಶಯವನ್ನು ಪುನಶ್ಚೇತನಗೊಳಿಸಲು ಟೆಂಡರ್ ಕರೆದಿದ್ದು, ಇದೀಗ ಇಸ್ರೇಲ್ ಮೂಲದ ಸಂಸ್ಥೆಯೊಂದು ಪುನಶ್ಚೇತನ ಟೆಂಡರ್ ಅನ್ನು ಪಡೆದಿದ್ದು ಕಾರ್ಯ ಆರಂಭಿಸಲಿದೆ. 
ತಿಪ್ಪಗೊಂಡನಹಳ್ಳಿ ಜಲಾಶಯ 1998ರಲ್ಲಿ ಕೊನೆಯ ಬಾರಿಗೆ ತುಂಬಿತ್ತು. 2004ರಲ್ಲಿ 72 ಅಡಿ ನೀರಿತ್ತು. ಆ ಬಳಿಕ ನೀರಿನ ಪ್ರಮಾಣ ಕಡಿಮೆಯಾಗುತ್ತಲೇ ಬಂತು. ಇದರಿಂದಾಗಿ ನೀರು ಸರಬರಾಜು ನಿಲ್ಲಿಸಲಾಗಿತ್ತು. ಇದೀಗ ಜಲಾಶಯದಲ್ಲಿನ ನೀರು ರಾಸಾಯನಿಕ ಮಿಶ್ರಿತವಾಗಿದೆ. ನೈಟ್ರೇಟ್ ಸೇರಿದಂತೆ ನೀರಿನಲ್ಲಿ ಕರಗಿದ ಘನವಸ್ತುಗಳ(ಟಿಡಿಎಸ್) ಪ್ರಮಾಣ ಜಲಾಶಯದಲ್ಲಿ ಶೇಖಡ 800ರಷ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT