ಸಂಗ್ರಹ ಚಿತ್ರ 
ರಾಜ್ಯ

ಮಾರ್ಗಸೂಚಿ ಉಲ್ಲಂಘಿಸಿ ಹೆಚ್ಚಿನ ಶುಲ್ಕ ಪಡೆಯುವ ರಾಜ್ಯದ ಶಾಲೆಗಳಿಗೆ ರೂ.10 ಲಕ್ಷ ದಂಡ?

ರಾಜ್ಯ ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುವ ಶಾಲೆಗಳಿಗೆ ರೂ.10 ಲಕ್ಷ ದಂಡ ಹಾಕಲು...

ಬೆಂಗಳೂರು: ರಾಜ್ಯ ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುವ ಶಾಲೆಗಳಿಗೆ ರೂ.10 ಲಕ್ಷ ದಂಡ ಹಾಕಲು ಸರ್ಕಾರ ನಿರ್ಧರಿಸಿದೆ. 
ಸಿಬಿಎಸ್ ಮತ್ತು ಐಸಿಎಸ್ಇ ಶಾಲೆಗಳು ವಸೂಲಿ ಮಾಡುತ್ತಿರುವ ಶುಲ್ಕದ ಮೇಲೆ ನಿಯಂತ್ರಣ ಹೇರುವ ಉದ್ದೇಶದಿಂದ ಮಾರ್ಗಸೂಚಿ ಪಾಲಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕರ್ನಾಟಕ ಶಿಕ್ಷಣ ಅಧಿನಿಮಯ ತಿದ್ದುಪಡಿಗಾಗಿ ನೂತನ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಮಂಡನೆ ಮಾಡಲಾಗಿದೆ. 
ತಿದ್ದುಪಡಿಯಾಗಿರುವ ಕಾಯ್ದೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಶಾಲೆಗಳಿಗೆ ರೂ.10 ಲಕ್ಷ ದಂಡ ವಿಧಿಸಲು ತಿಳಿಸಲಾಗಿದೆ. ಅಲ್ಲದೆ, ಕಾಯ್ದೆ 48ರ ಅಡಿಯಲ್ಲಿ ಪಡೆದುಕೊಂಡಿರುವ ಶುಲ್ಕದಲ್ಲಿ ಅರ್ಧದಷ್ಟು ಹಣವನ್ನು ವಿದ್ಯಾರ್ಥಿಗಳಿಗೆ ಶಾಲೆ ಹಿಂತಿರುಗಿಸಬೇಕೆಂದು ಹೇಳಲಾಗಿದೆ ಎಂದು ತಿಳಿದುಬಂದಿದೆ. 
ಪ್ರಸ್ತುತ ಸಿಬಿಎಸ್ಇ ಮತ್ತು ಐಸಿಎಸ್ಇ ಶಿಕ್ಷಣ ಸಂಸ್ಥೆಗಳ ಮೇಲೆ ರಾಜ್ಯ ಸರ್ಕಾರಕ್ಕೆ ಯಾವುದೇ ಹಿಡಿತವಿರಲಿಲ್ಲ. ಹೀಗಾಗಿ ಒಂದು ಬಾರಿ ನಿರಾಕ್ಷೇಪಣಾ ಪತ್ರ ಪಡೆದ ಬಳಿಕ ಆ ಶಾಲೆಗಳು ತಮ್ಮಿಷ್ಟಕ್ಕೆ ಬಂದಂತೆ ಕಾರ್ಯನಿರ್ವಹಿಸುತ್ತಿದ್ದವು. ತಿದ್ದುಪಡಿ ವಿಧೇಕದ ಅನ್ವಯ ಸಿಬಿಎಸ್ ಮತ್ತು ಐಸಿಎಸ್ಇ ಶಾಲೆಗಳು ವಸೂಲಿ ಮಾಡುತ್ತಿರುವ ಶುಲ್ಕದ ಮೇಲೆ ನಿಯಂತ್ರಣ, ಶಿಕ್ಷಕರ ಸೇವಾ ಸಂಬಂಧಿ ವಿಚಾರಗಳಲ್ಲಿ ಸರ್ಕಾರದ ಮೇಲ್ವಿಚಾರಣೆ ಮತ್ತು ಇಂತಹ ಶಾಲೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ವಸತಿ ಸಹಿತ ಶಾಲೆಗಳಲ್ಲಿ ಮಕ್ಕಳ ಭದ್ರತೆ ಮತ್ತು ಸುರಕ್ಷತೆ ವಿಚಾರವಾಗಿ ಸರ್ಕಾರದ ಮುಕ್ತ ಪ್ರವೇಶಕ್ಕೆ ಅವಕಾಶ ದೊರಕಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT