ಬೆಂಗಳೂರು: ರಾಜ್ಯ ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುವ ಶಾಲೆಗಳಿಗೆ ರೂ.10 ಲಕ್ಷ ದಂಡ ಹಾಕಲು ಸರ್ಕಾರ ನಿರ್ಧರಿಸಿದೆ.
ಸಿಬಿಎಸ್ ಮತ್ತು ಐಸಿಎಸ್ಇ ಶಾಲೆಗಳು ವಸೂಲಿ ಮಾಡುತ್ತಿರುವ ಶುಲ್ಕದ ಮೇಲೆ ನಿಯಂತ್ರಣ ಹೇರುವ ಉದ್ದೇಶದಿಂದ ಮಾರ್ಗಸೂಚಿ ಪಾಲಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕರ್ನಾಟಕ ಶಿಕ್ಷಣ ಅಧಿನಿಮಯ ತಿದ್ದುಪಡಿಗಾಗಿ ನೂತನ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಮಂಡನೆ ಮಾಡಲಾಗಿದೆ.
ತಿದ್ದುಪಡಿಯಾಗಿರುವ ಕಾಯ್ದೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವ ಶಾಲೆಗಳಿಗೆ ರೂ.10 ಲಕ್ಷ ದಂಡ ವಿಧಿಸಲು ತಿಳಿಸಲಾಗಿದೆ. ಅಲ್ಲದೆ, ಕಾಯ್ದೆ 48ರ ಅಡಿಯಲ್ಲಿ ಪಡೆದುಕೊಂಡಿರುವ ಶುಲ್ಕದಲ್ಲಿ ಅರ್ಧದಷ್ಟು ಹಣವನ್ನು ವಿದ್ಯಾರ್ಥಿಗಳಿಗೆ ಶಾಲೆ ಹಿಂತಿರುಗಿಸಬೇಕೆಂದು ಹೇಳಲಾಗಿದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಸಿಬಿಎಸ್ಇ ಮತ್ತು ಐಸಿಎಸ್ಇ ಶಿಕ್ಷಣ ಸಂಸ್ಥೆಗಳ ಮೇಲೆ ರಾಜ್ಯ ಸರ್ಕಾರಕ್ಕೆ ಯಾವುದೇ ಹಿಡಿತವಿರಲಿಲ್ಲ. ಹೀಗಾಗಿ ಒಂದು ಬಾರಿ ನಿರಾಕ್ಷೇಪಣಾ ಪತ್ರ ಪಡೆದ ಬಳಿಕ ಆ ಶಾಲೆಗಳು ತಮ್ಮಿಷ್ಟಕ್ಕೆ ಬಂದಂತೆ ಕಾರ್ಯನಿರ್ವಹಿಸುತ್ತಿದ್ದವು. ತಿದ್ದುಪಡಿ ವಿಧೇಕದ ಅನ್ವಯ ಸಿಬಿಎಸ್ ಮತ್ತು ಐಸಿಎಸ್ಇ ಶಾಲೆಗಳು ವಸೂಲಿ ಮಾಡುತ್ತಿರುವ ಶುಲ್ಕದ ಮೇಲೆ ನಿಯಂತ್ರಣ, ಶಿಕ್ಷಕರ ಸೇವಾ ಸಂಬಂಧಿ ವಿಚಾರಗಳಲ್ಲಿ ಸರ್ಕಾರದ ಮೇಲ್ವಿಚಾರಣೆ ಮತ್ತು ಇಂತಹ ಶಾಲೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ವಸತಿ ಸಹಿತ ಶಾಲೆಗಳಲ್ಲಿ ಮಕ್ಕಳ ಭದ್ರತೆ ಮತ್ತು ಸುರಕ್ಷತೆ ವಿಚಾರವಾಗಿ ಸರ್ಕಾರದ ಮುಕ್ತ ಪ್ರವೇಶಕ್ಕೆ ಅವಕಾಶ ದೊರಕಲಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos