ಪೊಲೀಸ್ ಗಸ್ತು 
ರಾಜ್ಯ

ಗಸ್ತು ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ; ಇನ್ನುಂದೆ ಶೇ.90ರಷ್ಟು ಪೊಲೀಸರು ಬೀಟ್ ತಿರುಗಲೇಬೇಕು!

ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳನ್ನು ತಡೆಯುವ ಸಲುವಾಗಿ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಆರ್.ಕೆ ದತ್ತಾ ಅವರು ಹೊರ ಆದೇಶವನ್ನು...

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳನ್ನು ತಡೆಯುವ ಸಲುವಾಗಿ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಆರ್.ಕೆ ದತ್ತಾ ಅವರು ಹೊಸ ಆದೇಶವನ್ನು ಹೊರಡಿಸಿದ್ದು ಇದರ ಅನ್ವಯ ಶೇಖಡ 90ರಷ್ಟು ಪೊಲೀಸರು ಗಸ್ತು ತಿರುಗಬೇಕಿದೆ. 
ಹೌದು, ಪೊಲೀಸ್ ಬೀಟ್ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಗಳನ್ನು ಮಾಡಲಾಗಿದ್ದು, ಇನ್ನುಂದೆ ಶೇ. 90ರಷ್ಟು ಪೊಲೀಸರು ಗಸ್ತು ತಿರುಗಬೇಕಿದೆ. ಪ್ರದೇಶಕೊಬ್ಬ ಪೊಲೀಸ್ ತತ್ವದಡಿಯಲ್ಲಿ ಬೀಟ್ ವ್ಯವಸ್ಥೆ ಜಾರಿಗೆ ಬರಲಿದೆ. ಪೇದೆ ಮತ್ತು ಮುಖ್ಯಪೇದೆ ಸಂಖ್ಯೆಗೆ ಅನುಗುಣವಾಗಿ ಗಸ್ತು ತಿರುಗುವ ವ್ಯವಸ್ಥೆಗೆ ರಾಜ್ಯ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 
ಪೊಲೀಸರು ತಮಗೆ ವಹಿಸಿರುವ ಜವಾಬ್ದಾರಿಯ ಜತೆಗೆ ಗುಸ್ತು ತಿರುಗಬೇಕಿದೆ. ಅಲ್ಲದೆ ರಾತ್ರಿ ವೇಳೆಯೂ ವಿಶೇಷ ಬೀಟ್ ವ್ಯವಸ್ಥೆಗೆ ನಿರ್ಧಾರ ಕೈಗೊಳ್ಳಲಾಗಿದ್ದು. ಪ್ರತಿ ಬೀಟ್ ನಲ್ಲಿಯೂ ನಾಗರಿಕರ ಸದಸ್ಯರೊಬ್ಬರನ್ನು ನೇಮಕ ಮಾಡಲಾಗುತ್ತದೆ. ಬಳಿಕ ತಿಂಗಳಿಗೊಮ್ಮೆ ಬೀಟ್ ಪೊಲೀಸ್ ಮತ್ತು ನಾಗರಿಕ ಸದಸ್ಯರ ಜತೆ ಆಯಾ ಠಾಣಾಧಿಕಾರಿಗಳ ಸಮ್ಮುಖದಲ್ಲೇ ಸಭೆ ನಡೆಯಲಿದೆ ಎಂದು ಆರ್ ಕೆ ದತ್ತಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳದಲ್ಲಿ ಮತ್ತೊಂದು ಪವಾಡ, 10 ದಿನಗಳ ಬಳಿಕ ಇಬ್ಬರ ಜೀವಂತ ರಕ್ಷಣೆ! ಸಾವಿನ ಸಂಖ್ಯೆ 1,344 ಕ್ಕೇರಿಕೆ

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

‘SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ’: ಮಾಜಿ ಮುಖ್ಯ ಚುನಾವಣಾ ಆಯುಕ್ತ S Y Quraishi

ಯುಪಿ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ನಮಾಜ್: SP ನಾಯಕನ ವಿರುದ್ಧ FIR ದಾಖಲು! ಅಪಮಾನ ಎಂದ ಕಾಂಗ್ರೆಸ್!

'ಅಸಹ್ಯಕರ', ಕೋರ್ಟ್‌ನ ಆತ್ಮಸಾಕ್ಷಿಗೆ ನೋವುಂಟಾಗಿದೆ: ಮೋದಿ ಪೋಸ್ಟರ್ ಪ್ರದರ್ಶಿಸಿದ್ದ ಬಂಗಾಳಿ ನಟಿಗೆ ಹೈಕೋರ್ಟ್‌ ತರಾಟೆ!