ನಂದಿನಿ ಮಸಾಲ ಮಜ್ಜಿಗೆ 
ರಾಜ್ಯ

ಮೈಸೂರಲ್ಲಿ ಚುನಾವಣಾ ಕಾವಿನ ಜೊತೆಗೆ ಬಿಸಿಲಿನ ಆರ್ಭಟ: ಮಜ್ಜಿಗೆ ಮೊರೆ ಹೋದ ರಾಜಕೀಯ ನಾಯಕರು

ನಂಜನಗೂಡು, ಗುಂಡ್ಲುಪೇಟೆಯಲ್ಲಿ ಉಪ ಚುನಾವಣೆ ಪ್ರಚಾರದ ಭರಾಟೆ ಮುಂದುವರಿದಿದೆ, ಚುನಾವಣಾ ಕಾವಿನ ಜೊತೆಗೆ ಬಿಸಿಲಿನ ಆರ್ಭಟವೂ...

ಮೈಸೂರು: ನಂಜನಗೂಡು, ಗುಂಡ್ಲುಪೇಟೆಯಲ್ಲಿ ಉಪ ಚುನಾವಣೆ ಪ್ರಚಾರದ ಭರಾಟೆ ಮುಂದುವರಿದಿದೆ, ಚುನಾವಣಾ ಕಾವಿನ ಜೊತೆಗೆ ಬಿಸಿಲಿನ ಆರ್ಭಟವೂ ಹೆಚ್ಚಾಗಿದೆ.

ಪ್ರಚಾರದಲ್ಲಿ ತೊಡಗಿರುವ ಪಕ್ಷದ ಮುಖಂಡರು ಬೆವರು ಹಾಗೂ ನಿರ್ಜಲೀಕರಣ ಸಮಸ್ಯೆಯಿಂದ ಮುಕ್ತಿ ಪಡೆಯಲು ಮಜ್ಜಿಗೆ ಮೊರೆ ಹೋಗಿದ್ದಾರೆ ಪ್ರಚಾರದ ವೇಳೆ ತಮ್ಮ ಬಾಯಾರಿಕೆ ಹಿಂಗಿಸಿಕೊಳ್ಳಲು ನಂದಿನಿ ಮಸಾಲಾ ಮಜ್ಜಿಗೆಯನ್ನು ಯಥೇಚ್ಚವಾಗಿ ಬಳಸುತ್ತಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಡಜನ್ ಗಟ್ಟಲೇ ಮಜ್ಜಿಗೆ ಹಾಗೂ ಕೋಲ್ಡ್ ವಾಟರ್ ಬಾಟಲ್ ಗಳನ್ನು ಉಪಯೋಗಿಸುತ್ತಿದ್ದಾರೆ. ಇದರಿಂದ ಮಜ್ಜಿಗೆ ಮಾರಾಟದಲ್ಲಿ ಏರಿಕೆಯಾಗಿದೆ.

ದಿನವೊಂದಕ್ಕೆ ಸುಮಾರು 200 ಲೀಟರ್ ಮಾರಾಟವಾಗುತ್ತಿದ್ದ ಮಜ್ಜಿಗೆ ಕಳೆದ ಒಂದು ವಾರದಿಂದ 300 ಲೀಟರ್ ಗೆ ಏರಿಕೆಯಾಗಿದೆ. ಏಪ್ರಿಲ್ 7 ರವರೆಗೂ ಚುನಾವಣಾ ಪ್ರಚಾರ ನಡೆಯಲಿದ್ದು, ಅಲ್ಲಿಯವರೆಗೂ ಮಜ್ಜಿಗೆ ಮಾರಾಟ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಮಾರಾಟಾಗರರು ತಿಳಿಸಿದ್ದಾರೆ.

ಉಪ ಚುನಾವಣೆಯಿಂದ ಮಜ್ಜಿಗೆ ಬೇಡಿಕೆ ಹೆಚ್ಚಾಗಿದ್ದು, ಅಗತ್ಯವಿರುವ ಪ್ರಮಾಣದ ಮಜ್ಜಿಗೆ ಪೂರೈಸಲು ಮೈಮೂಲ್ ಸಿದ್ದವಿದೆ ಎಂದು ಮೈಮೂಲ್ ಮಾರಾಟ ವಿಭಾಗದ ಅಧಿಕಾರಿ ನಾಗರಾಜೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಹಠಾತ್ ಪ್ರವಾಹಕ್ಕೆ ಮನೆ ಕುಸಿತ- ಐವರ ಸಾವು: 1,337 ರಸ್ತೆಗಳು ಬಂದ್, 3 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

SCROLL FOR NEXT