ಸಾಂದರ್ಭಿಕ ಚಿತ್ರ 
ರಾಜ್ಯ

ಬರದ ನಡುವೆ ಕರೆಂಟ್ 'ಶಾಕ್": ಇಂದಿನಿಂದ ವಿದ್ಯುತ್ ದರದಲ್ಲಿ ಏರಿಕೆ

: ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ನಂತರ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಜನರಿಗೆ ಶಾಕ್ ನೀಡಲು ಮುಂದಾಗಿದೆ. ಇಂದಿನಿಂದ ಅಂದರೇ ಏಪ್ರಿಲ್ 1...

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ನಂತರ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಜನರಿಗೆ ಶಾಕ್ ನೀಡಲು ಮುಂದಾಗಿದೆ. ಇಂದಿನಿಂದ ಅಂದರೇ ಏಪ್ರಿಲ್ 1 ರಿಂದ ವಿದ್ಯುತ್ ದರದಲ್ಲಿ ಏರಿಕೆಯಾಗಲಿದೆ ಎಂದು ಕೆಇಆರ್ ಸಿ ಅಧ್ಯಕ್ಷ ಎಂ.ಕೆ ಶಂಕರಲಿಂಗೇಗೌಡ ಹೇಳಿದ್ದಾರೆ.

ಪ್ರತಿ ಯೂನಿಟ್ ಗೆ ಎಷ್ಟು ಏರಿಕೆಯಾಗಲಿದೆ ಎಂಬುದನ್ನು ಇನ್ನೂ ಪ್ರಕಟಿಸಿಲ್ಲ. ಬೆಸ್ಕಾಂ ಹೊರತು ಪಡಿಸಿ ಎಲ್ಲಾ ಎಸ್ಕಾಂಗಳಿಂದ ಡಾಟಾ ಸಂಗ್ರಹಿಸಿರುವ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಐದು ದಿನಗಳೊಳಗೆ ದರ ನಿಗದಿ ಪಡಿಸುವುದಾಗಿ ಹೇಳಿದೆ.

ಬರ ಪರಿಸ್ಥಿತಿ ಹಾಗೂ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಪ್ರತಿ ಯೂನಿಟ್ ಗೆ 1.48 ಪೈಸೆ ಬೆಲೆ ಏರಿಸಬೇಕೆಂದು ಎಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ.

2012-13 ರಲ್ಲಿ ಎಸ್ಕಾಂ 73 ಪೈಸೆ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿತ್ತು, ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಕೇವಲ 13 ಪೈಸೆ ಮಾತ್ರ ಏರಿಕೆ ಮಾಡಿತ್ತು. 2013-14, ಮತ್ತು 2016-17 ರಲ್ಲಿ 1.02 ಪೈಸೆ ಏರಿಕೆಗೆ ಶಿಫಾರಸು ಮಾಲಾಗಿತ್ತು, ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ 80 ಪೈಸೆ ಏರಿಕೆ ಮಾಡಿತ್ತು ಎಂದು ಅವರು ಹೇಳಿದ್ದಾರೆ.

ಕಳೆದ ಫೆಬ್ರವರಿಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಪ್ರತಿದಿನ 280 ಮೆಗಾ ಯೂನಿಟ್ ವಿದ್ಯುತ್ ಬಳಕೆಯಾಗುತ್ತಿದೆ. ಎಲ್ಲಿಯೂ ಪವರ್  ಕಟ್ ಸಮಸ್ಯೆ ಕೇಳಿ ಬರುತ್ತಿಲ್ಲ ಎಂದು ಕೆಪಿಸಿಎಲ್ ಎಂಡಿ ಕುಮಾರ್ ನಾಯಕ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಏಳು ಹೊಚ್ಚ ಹೊಸ ವಿಮಾನಗಳನ್ನು ಹೊಡೆದುರುಳಿಸಲಾಯಿತು, ಭಾರತ-ಪಾಕ್ ಯುದ್ಧ ತಪ್ಪಿಸಿದ್ದು ನಾನೇ' : ಟ್ರಂಪ್ ಪುನರುಚ್ಛಾರ

ಹರಿಯಾಣ: ಅಂಬಾಲಾ ವಾಯುನೆಲೆಗೆ ದ್ರೌಪದಿ ಮುರ್ಮು ಭೇಟಿ; ರಾಫೆಲ್ ನಲ್ಲಿ ಹಾರಾಟ ನಡೆಸಿ ದಾಖಲೆ ನಿರ್ಮಿಸಿದ ರಾಷ್ಟ್ರಪತಿ

ಉದ್ಯೋಗಕ್ಕಾಗಿ ನಗದು ಹಗರಣ: ತನಿಖೆ ಆರಂಭಿಸಲು ತಮಿಳು ನಾಡು ಪೊಲೀಸರಿಗೆ ಪತ್ರ ಬರೆದ ED

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಅನಿವಾರ್ಯತೆ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಇದೆ: ಯತೀಂದ್ರ ಸಿದ್ದರಾಮಯ್ಯ

ಗಾಜಾ ಮೇಲೆ ಪ್ರಬಲ ದಾಳಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಆದೇಶ: ವೈಮಾನಿಕ ದಾಳಿಯಲ್ಲಿ 30 ಮಂದಿ ಸಾವು

SCROLL FOR NEXT