ಸಾಂದರ್ಭಿಕ ಚಿತ್ರ 
ರಾಜ್ಯ

ಬರದ ನಡುವೆ ಕರೆಂಟ್ 'ಶಾಕ್": ಇಂದಿನಿಂದ ವಿದ್ಯುತ್ ದರದಲ್ಲಿ ಏರಿಕೆ

: ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ನಂತರ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಜನರಿಗೆ ಶಾಕ್ ನೀಡಲು ಮುಂದಾಗಿದೆ. ಇಂದಿನಿಂದ ಅಂದರೇ ಏಪ್ರಿಲ್ 1...

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ನಂತರ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಜನರಿಗೆ ಶಾಕ್ ನೀಡಲು ಮುಂದಾಗಿದೆ. ಇಂದಿನಿಂದ ಅಂದರೇ ಏಪ್ರಿಲ್ 1 ರಿಂದ ವಿದ್ಯುತ್ ದರದಲ್ಲಿ ಏರಿಕೆಯಾಗಲಿದೆ ಎಂದು ಕೆಇಆರ್ ಸಿ ಅಧ್ಯಕ್ಷ ಎಂ.ಕೆ ಶಂಕರಲಿಂಗೇಗೌಡ ಹೇಳಿದ್ದಾರೆ.

ಪ್ರತಿ ಯೂನಿಟ್ ಗೆ ಎಷ್ಟು ಏರಿಕೆಯಾಗಲಿದೆ ಎಂಬುದನ್ನು ಇನ್ನೂ ಪ್ರಕಟಿಸಿಲ್ಲ. ಬೆಸ್ಕಾಂ ಹೊರತು ಪಡಿಸಿ ಎಲ್ಲಾ ಎಸ್ಕಾಂಗಳಿಂದ ಡಾಟಾ ಸಂಗ್ರಹಿಸಿರುವ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಐದು ದಿನಗಳೊಳಗೆ ದರ ನಿಗದಿ ಪಡಿಸುವುದಾಗಿ ಹೇಳಿದೆ.

ಬರ ಪರಿಸ್ಥಿತಿ ಹಾಗೂ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಪ್ರತಿ ಯೂನಿಟ್ ಗೆ 1.48 ಪೈಸೆ ಬೆಲೆ ಏರಿಸಬೇಕೆಂದು ಎಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ.

2012-13 ರಲ್ಲಿ ಎಸ್ಕಾಂ 73 ಪೈಸೆ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿತ್ತು, ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಕೇವಲ 13 ಪೈಸೆ ಮಾತ್ರ ಏರಿಕೆ ಮಾಡಿತ್ತು. 2013-14, ಮತ್ತು 2016-17 ರಲ್ಲಿ 1.02 ಪೈಸೆ ಏರಿಕೆಗೆ ಶಿಫಾರಸು ಮಾಲಾಗಿತ್ತು, ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ 80 ಪೈಸೆ ಏರಿಕೆ ಮಾಡಿತ್ತು ಎಂದು ಅವರು ಹೇಳಿದ್ದಾರೆ.

ಕಳೆದ ಫೆಬ್ರವರಿಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಪ್ರತಿದಿನ 280 ಮೆಗಾ ಯೂನಿಟ್ ವಿದ್ಯುತ್ ಬಳಕೆಯಾಗುತ್ತಿದೆ. ಎಲ್ಲಿಯೂ ಪವರ್  ಕಟ್ ಸಮಸ್ಯೆ ಕೇಳಿ ಬರುತ್ತಿಲ್ಲ ಎಂದು ಕೆಪಿಸಿಎಲ್ ಎಂಡಿ ಕುಮಾರ್ ನಾಯಕ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

SCROLL FOR NEXT