ಸಾಂದರ್ಭಿಕ ಚಿತ್ರ 
ರಾಜ್ಯ

ಬರದ ನಡುವೆ ಕರೆಂಟ್ 'ಶಾಕ್": ಇಂದಿನಿಂದ ವಿದ್ಯುತ್ ದರದಲ್ಲಿ ಏರಿಕೆ

: ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ನಂತರ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಜನರಿಗೆ ಶಾಕ್ ನೀಡಲು ಮುಂದಾಗಿದೆ. ಇಂದಿನಿಂದ ಅಂದರೇ ಏಪ್ರಿಲ್ 1...

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ನಂತರ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಜನರಿಗೆ ಶಾಕ್ ನೀಡಲು ಮುಂದಾಗಿದೆ. ಇಂದಿನಿಂದ ಅಂದರೇ ಏಪ್ರಿಲ್ 1 ರಿಂದ ವಿದ್ಯುತ್ ದರದಲ್ಲಿ ಏರಿಕೆಯಾಗಲಿದೆ ಎಂದು ಕೆಇಆರ್ ಸಿ ಅಧ್ಯಕ್ಷ ಎಂ.ಕೆ ಶಂಕರಲಿಂಗೇಗೌಡ ಹೇಳಿದ್ದಾರೆ.

ಪ್ರತಿ ಯೂನಿಟ್ ಗೆ ಎಷ್ಟು ಏರಿಕೆಯಾಗಲಿದೆ ಎಂಬುದನ್ನು ಇನ್ನೂ ಪ್ರಕಟಿಸಿಲ್ಲ. ಬೆಸ್ಕಾಂ ಹೊರತು ಪಡಿಸಿ ಎಲ್ಲಾ ಎಸ್ಕಾಂಗಳಿಂದ ಡಾಟಾ ಸಂಗ್ರಹಿಸಿರುವ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಐದು ದಿನಗಳೊಳಗೆ ದರ ನಿಗದಿ ಪಡಿಸುವುದಾಗಿ ಹೇಳಿದೆ.

ಬರ ಪರಿಸ್ಥಿತಿ ಹಾಗೂ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಪ್ರತಿ ಯೂನಿಟ್ ಗೆ 1.48 ಪೈಸೆ ಬೆಲೆ ಏರಿಸಬೇಕೆಂದು ಎಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ ಎಂದು ಅವರು ಹೇಳಿದ್ದಾರೆ.

2012-13 ರಲ್ಲಿ ಎಸ್ಕಾಂ 73 ಪೈಸೆ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿತ್ತು, ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಕೇವಲ 13 ಪೈಸೆ ಮಾತ್ರ ಏರಿಕೆ ಮಾಡಿತ್ತು. 2013-14, ಮತ್ತು 2016-17 ರಲ್ಲಿ 1.02 ಪೈಸೆ ಏರಿಕೆಗೆ ಶಿಫಾರಸು ಮಾಲಾಗಿತ್ತು, ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ 80 ಪೈಸೆ ಏರಿಕೆ ಮಾಡಿತ್ತು ಎಂದು ಅವರು ಹೇಳಿದ್ದಾರೆ.

ಕಳೆದ ಫೆಬ್ರವರಿಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಪ್ರತಿದಿನ 280 ಮೆಗಾ ಯೂನಿಟ್ ವಿದ್ಯುತ್ ಬಳಕೆಯಾಗುತ್ತಿದೆ. ಎಲ್ಲಿಯೂ ಪವರ್  ಕಟ್ ಸಮಸ್ಯೆ ಕೇಳಿ ಬರುತ್ತಿಲ್ಲ ಎಂದು ಕೆಪಿಸಿಎಲ್ ಎಂಡಿ ಕುಮಾರ್ ನಾಯಕ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ, ಸೆ.22ರ ನವರಾತ್ರಿ ದಿನ ಜಾರಿ

GST 2.0: ಯಾವುದಕ್ಕೆ ತೆರಿಗೆ, ಯಾವುದಕ್ಕೆ ವಿನಾಯಿತಿ ಇಲ್ಲಿದೆ ಮಾಹಿತಿ...

ಮುಖ್ಯಮಂತ್ರಿ ಹುದ್ದೆಯಿಂದ ಫಡ್ನವೀಸ್ ಗೆ ಕೊಕ್: ರಾಷ್ಟ್ರ ರಾಜಕಾರಣಕ್ಕೆ 'ಮಹಾ'ಸಿಎಂ; ಬಿಜೆಪಿ ರಾಷ್ಟ್ರಾಧ್ಯಕ್ಷ ರೇಸ್ ನಲ್ಲಿ ರೂಪಾಲಾ !

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

SCROLL FOR NEXT