ಸಾಂದರ್ಭಿಕ ಚಿತ್ರ 
ರಾಜ್ಯ

ಕಳಪೆ ಹಾಜರಾತಿ: 19 ಸಾವಿರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ವಂಚಿತ

ಕಡಿಮೆ ಹಾಜರಾತಿಯ ಕಾರಣ ಸುಮಾರು 19 ಸಾವಿರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವುದರಿಂದ...

ಬೆಂಗಳೂರು: ಕಡಿಮೆ ಹಾಜರಾತಿಯ ಕಾರಣ ಸುಮಾರು 19 ಸಾವಿರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವುದರಿಂದ ವಂಚಿತರಾದ್ದಾರೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ಪ್ರಕಾರ, ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆ ಹಾಜರಾತಿ ಪಡೆದ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ. ಕಳೆದ ವರ್ಷ
 18,785 ವಿದ್ಯಾರ್ಥಿಗಳು ಪರೀಕ್ಷೆ ಬರೆದಿರಲಿಲ್ಲ, ಈ ವರ್ಷ 19,306 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ಪ್ರತಿಯೊಬ್ಬ ವಿದ್ಯಾರ್ಥಿಯು ಶೇ,75 ರಷ್ಟು ಹಾಜರಾತಿ ಹೊಂದಿರಬೇಕು, ಇಲ್ಲದಿದ್ದರೇ ಅಂಥಹ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಹೇಳಿದೆ.

ಇತ್ತೀಚೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಸುಮಾರು 8 ಸಾವಿರ ವಿದ್ಯಾರ್ಥಿಗಳು ಕಡಿಮೆ ಹಾಜರಾತಿಯಿಂದ ಪರೀಕ್ಷೆ ಬರೆದಿರಲಿಲ್ಲ.ಕೆಲ ವಿದ್ಯಾರ್ಥಿಗಳು ಹಾಜರಾತಿಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಎಲ್ಲೋ ಕೆಲವು ವಿದ್ಯಾರ್ಥಿಗಳಿಗೆ ಮಾತ್ರ ಆರೋಗ್ಯ ಸಮಸ್ಯೆ ಇರುತ್ತದೆ. ಅಂಥ ಮಕ್ಕಳು ವೈದ್ಯರ ಪ್ರಮಾಣ ಪತ್ರವನ್ನು ಮುಖ್ಯ ಶಿಕ್ಷಕರಿಗೆ ಸಲ್ಲಿಸಿ ಪ್ರವೇಶ ಪತ್ರ ಪಡೆಯಬಹುದಾಗಿದೆ. ಒಂದು ವೇಳೆ ಪ್ರಮಾಣ ಪತ್ರನಕಲಿ ಎಂದು ಗೊತ್ತಾದರೇ ಅಂತವುಗಳನ್ನು ತಿರಸ್ಕರಿಸಲಾಗುವುದು ಎಂದು ಪರೀಕ್ಷಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಪ್ರತಿ ವರ್ಷ ಸುಮಾರು 13 ಸಾವಿರ ವಿದ್ಯಾರ್ಥಿಗಳು ಕಡಿಮೆ ಹಾಜರಾತಿಯ ಕಾರಣ ಪರೀಕ್ಷೆಯಿಂದ ವಂಚಿತರಾಗುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ಮುಂದುವರಿಕೆ..!

UPI MDR: ಗ್ರಾಹಕರಿಗೆ ಮತ್ತೊಂದು ತಲೆ ಬಿಸಿ; ಇನ್ನು ಮುಂದೆ ಪೆಟ್ರೋಲ್ ಪಂಪ್ ಗಳಲ್ಲಿ 2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಬಂದ್!

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು, ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: ಕೈ ಪಾಳಯದಲ್ಲಿ ಶುರುವಾಯ್ತಾ ಹೊಸ ಆಂತರಿಕ ತಂತ್ರಗಾರಿಕೆ..?