ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ಕಲ್ಲುಕ್ವಾರಿಯಲ್ಲಿ ಸಿಡಿಲು ಬಡಿದು ಸಿಡಿಮದ್ದು ಸ್ಫೋಟ; ಮೂವರ ಸಾವು

ಕಲ್ಲುಕ್ವಾರಿಯೊಂದರಲ್ಲಿ ಸಿಡಿಲು ಬಡಿದು ಸಿಡಿಮದ್ದು ಸ್ಫೋಟಗೊಂಡ ಪರಿಣಾಮ ತಂದೆ, ಮಗ ಸೇರಿದಂತೆ ಮೂವರು ಮೃತಪಟ್ಟ ....

ಹಾಸನ: ಕಲ್ಲುಕ್ವಾರಿಯೊಂದರಲ್ಲಿ ಸಿಡಿಲು ಬಡಿದು ಸಿಡಿಮದ್ದು ಸ್ಫೋಟಗೊಂಡ ಪರಿಣಾಮ ತಂದೆ, ಮಗ ಸೇರಿದಂತೆ ಮೂವರು ಮೃತಪಟ್ಟ ದಾರುಣ ಘಟನೆ ಹಾಸನ ತಾಲ್ಲೂಕಿನ ಕಟ್ಟಾಯ ಬಳಿ ಸೋಮವಾರ ತಡ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ ಸಿಡಿಲಿನ ‌ರಭಸಕ್ಕೆ ಕಲ್ಲು ಕ್ವಾರಿಯಲ್ಲಿ ಬಂಡೆ ಸ್ಫೋಟಿಸಲು ಇಡಲಾಗಿದ್ದ ಸಿಡಿಮದ್ದು ಸ್ಫೋಟಗೊಂಡ ಪರಿಣಾಮ ಕಾರ್ಮಿಕರಾದ ಜಗದೀಶ(50) ಮತ್ತು ಅವರ ಪುತ್ರ ಪುನೀತ್‌(23) ಹಾಗೂ ಮತ್ತೊಬ್ಬ ಕಾರ್ಮಿಕ ನಾಗ(40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಫೋಟಕ ಒಮ್ಮೆಲೆ ಸಿಡಿದ ಪರಿಣಾಮವಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 
ಸಿಡಿಲು ಬಂಡೆಯಲ್ಲಿ ಇಟ್ಟ ಸ್ಫೋಟಕ ಸಾಮಗ್ರಿಗೆ ಬಡಿದಿದ್ದೇ ಅವಘಡಕ್ಕೆ ಕಾರಣವೆಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT