ವೆಂಕಯ್ಯ ನಾಯ್ಡು 
ರಾಜ್ಯ

ಬೆಂಗಳೂರಿನ ಭೂಮಿ ಬೆಲೆ ಅಮೆರಿಕಾ ನಗರಗಳಲ್ಲಿನ ಬೆಲೆಗೆ ಸಮನಾಗಿದೆ: ವೆಂಕಯ್ಯನಾಯ್ಡು

ಅಮೆರಿಕಾದ ವಾಷ್ಟಿಂಗ್ಟನ್, ನ್ಯೂಯಾರ್ಕ್ ನಗರಗಳಂತೆ ಐಟಿ ಸಿಟಿ ಬೆಂಗಳೂರಿನಲ್ಲೂ ಭೂಮಿಯ ಬೆಲೆ ಸರಿಸಮಾನವಾಗಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ..

ಬೆಂಗಳೂರು: ಅಮೆರಿಕಾದ ವಾಷ್ಟಿಂಗ್ಟನ್, ನ್ಯೂಯಾರ್ಕ್ ನಗರಗಳಂತೆ ಐಟಿ ಸಿಟಿ ಬೆಂಗಳೂರಿನಲ್ಲೂ ಭೂಮಿಯ ಬೆಲೆ ಸರಿಸಮಾನವಾಗಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ. 
ಕೇಂದ್ರದ ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ನಿನ್ನೆಯಿಂದ ಜಾರಿಯಾಗಿರುವ ರಿಯಲ್ ಎಸ್ಟೇಟ್ ಕಾಯ್ದೆ ಜನಪರವಾಗಿದೆ. ಬಣ್ಣ ಬಣ್ಣದ ದೊಡ್ಡ ದೊಡ್ಡ ಜಾಹೀರಾತುಗಳನ್ನು ನೀಡಿ ಜನರಿಗೆ ವಂಚಿಸುವ ಕಟ್ಟಡ ನಿರ್ಮಾಣ ಸಂಸ್ಥೆಗಳಿಗೆ ಈ ಕಾಯ್ದೆಯಿಂದ ಕಡಿವಾಣ ಬೀಳಲಿದೆ ಎಂದರು.
ಈ ರಿಯಲ್ ಎಸ್ಟೇಟ್ ಕಾಯ್ದೆ ಜಾರಿಯಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ. ಕಟ್ಟಡ ನಿರ್ಮಾಣ ಸಂಸ್ಥೆಗಳು ಯಾವ ಸೌಲಭ್ಯವನ್ನು ಕೊಡುವುದಾಗಿ ಹೇಳುತ್ತವೋ ಅವನ್ನ ಗ್ರಾಹಕನಿಗೆ ನೀಡಲೇಬೇಕು. ಸೌಲಭ್ಯ ನೀಡದಿದ್ದರೆ ಅಂತಹ ಕಟ್ಟಡ ನಿರ್ಮಾಣ ಸಂಸ್ಥೆಗಳ ವಿರುದ್ಧ ಕಾಯ್ದೆ ಪ್ರಕಾರ ಕ್ರಮ ಆಗಲಿದೆ ಎಂದರು.
ರಿಯಲ್ ಎಸ್ಟೇಟ್ ಕಾಯ್ದೆಯನ್ನು ಈಗಾಗಲೇ 14 ರಾಜ್ಯಗಳು ಜಾರಿ ಮಾಡಿವೆ. ರಾಜ್ಯದಲ್ಲೂ 15 ದಿನಗಳಲ್ಲಿ ಈ ಕಾಯ್ದೆ ಜಾರಿ ಮಾಡುವ ಭರವಸೆ ಸರ್ಕಾರದಿಂದ ಸಿಕ್ಕಿದೆ. 
ಬೆಂಗಳೂರು ಮುಂದಿನ ಹಂತದಲ್ಲಿ ಸ್ಮಾರ್ಟ್ ಸಿಟಿ ಆಗುವ ಸಾಧ್ಯತೆ ಇದೆ ಎಂದ ಅವರು, ಈಗಾಗಲೇ ರಾಜ್ಯದ ತುಮಕೂರು, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಶಿವಮೊಗ್ಗ ಈ 6 ನಗರಗಳು ಸ್ಮಾರ್ಟ್ ಸಿಟಿ ಯೋಜನೆಯಲ್ಲಿವೆ. ಈ ನಗರಗಳ ಅಭಿವೃದ್ಧಿಗೆ 2ನೇ ಹಂತದಲ್ಲಿ 428 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
ಅದೇ ರೀತಿ ಅಮೃತ್ ಯೋಜನೆಯಡಿ 191 ಕೋಟಿ, ಸ್ವಚ್ಛ ಭಾರತ್‌ಗಾಗಿ 37 ಕೋಟಿ ರೂ., ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ವಿವಿಧ ವಸತಿ ಯೋಜನೆಗಳಿಗೆ 58.3 ಕೋಟಿ ರೂ.ಗಳ ಚೆಕ್‌ನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT