ಮೈಸೂರು: ಹಿಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ. ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಮತ್ತು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರಿಗೌಡ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ನಜರ್ ಬಾದ್ ಠಾಣೆ ಪೊಲೀಸರು ಗುರುವಾರ ಮೈಸೂರಿನ 3ನೇ ಜೆಎಂಎಫ್ ಸಿ ನ್ಯಾಯಲಯಕ್ಕೆ ಮರಿಗೌಡ ಮತ್ತು ಅವರ ಇಬ್ಬರು ಬೆಂಬಲಿಗರಾದ ಬಸವರಾಜ್ ಮತ್ತು ಮಂಜುನಾಥ್ ವಿರುದ್ಧ ಸುಮಾರು 45 ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸಿದ್ದಾರೆ. ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಸಿ.ಶಿಖಾ ಅವರು ನಜರಬಾದ್ ಠಾಣೆಯಲ್ಲಿ ಮರೀಗೌಡ ವಿರುದ್ಧ ಸೆಕ್ಷನ್ 341, 354 ಮತ್ತು 504 ಅಡಿಯಲ್ಲಿ ದೂರು ದಾಖಲಿಸಿದ್ದರು.
ಜುಲೈ 3ರ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಫ್ತಾರ್ ಕೂಟದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದರು. ಶಿಷ್ಟಾಚಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಸರ್ಕಾರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡಿದ್ದರು. ಆಗ ಅಲ್ಲಿಗೆ ಆಗಮಿಸಿದ್ದ ಡಿಸಿಯಾಗಿದ್ದ ಸಿ.ಸಿಖಾ ಅವರನ್ನು ಮರೀಗೌಡ ಏಕವಚನದಲ್ಲಿ ನಿಂದಿಸಿದ್ದರು.
ಈ ಸಂಬಂಧ ಶಿಖಾ ಮರಿಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದರು, ನಂತರ ಮರಿಗೌಡ ಕೆಲ ದಿನಗಳ ಕಾಲ ತಲೆ ಮರೆಸಿಕೊಂಡಿದ್ದರು, ಅದಾದ ಬಳಿಕ ಬಲವಂತವಾಗಿ ಮರಿಗೌಡ ಅವರು ನ್ಯಾಯಾಲಯಕ್ಕೆ ಶರಣಾಗಿದ್ದರು, ಆಗಸ್ಟ್ 3 ರಂದು ಕರ್ನಾಟಕ ಹೈಕೋರ್ಟ್ ಮರಿಗೌಡ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos