ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಮುಜರಾಯಿ ದೇವಾಲಯಗಳ ಮುಂದೆ 'ಎಲ್ಲರಿಗೂ ಮುಕ್ತ ಪ್ರವೇಶ' ಫಲಕ ಕಡ್ಡಾಯ

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಮೈಸೂರು ಜಿಲ್ಲೆಯ ಎಲ್ಲಾ ದೇವಾಲಯಗಳ ಪ್ರವೇಶ ದ್ವಾರದಲ್ಲಿ ಇನ್ನುಮಂದೆ ಹೊಸದೊಂದು ಫಲಕ ...

ಮೈಸೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಮೈಸೂರು ಜಿಲ್ಲೆಯ ಎಲ್ಲಾ ದೇವಾಲಯಗಳ ಪ್ರವೇಶ ದ್ವಾರದಲ್ಲಿ ಇನ್ನುಮಂದೆ ಹೊಸದೊಂದು ಫಲಕ ಕಾಣಲಿದೆ.
ಎಲ್ಲರಿಗೂ ಮುಕ್ತ ಪ್ರವೇಶ ಎಂಬ ಫಲಕವನ್ನು ದೇವಾಲಯಗಳ ಮುಂಭಾಗ ಹಾಕಬೇಕೆಂದು ಜಿಲ್ಲಾಧಿಕಾರಿ ಡಿ. ರಣ್ ದೀಪ್ ಕಠಿಣ ಆದೇಶ ಹೊರಡಿಸಿದ್ದಾರೆ.
ಮುಜರಾಯಿ ಇಲಾಖೆಗೆ ಸೇರಿದ ದೇವಾಸ್ಥಾನಗಳಲ್ಲಿ ಗಂಡು-ಹೆಣ್ಣು, ಜಾತಿ ಮತ ನೋಡದೇ ಎಲ್ಲರಿಗೂ ದೇವಾಲಯ ಪ್ರವೇಶ ನೀಡಬೇಕು. ಈ ಹಿನ್ನೆಲೆಯಲ್ಲಿ ಪ್ರವೇಶ ಫಲಕ ಕಡ್ಡಾಯಗೊಳಿಸಬೇಕೆಂದು ಆದೇಶಿಸಿದ್ದಾರೆ. ಮೇ- 20 ರೊಳಗೆ ಫಲಕ ಅಡವಳಿಕೆಗೆ ಗಡುವು ನೀಡಲಾಗಿದೆ.
ಹನಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿನ ದೇವಾಲಯಕ್ಕೆ ಪ್ರವೇಶ ನೀಡುತ್ತಿಲ್ಲ ಎಂದು ಕೆಲ ದಲಿತರು ದೂರು ನೀಡಿದ್ದರು. ಹಲವು ದೇವಾಲಯಗಳಲ್ಲಿ ಇಂದಿಗೂ ದಲಿತರಿಗೆ ಪ್ರವೇಶ ನೀಡುತ್ತಿಲ್ಲ. ಈ ಸಂಬಂದ ಎಸ್ ಸಿ ಎಸ್ಟಿ ಮಾನಿಟರಿಂಗ್ ಕಮಿಟಿ ದಲಿತ ಸಂಘಟನೆಗಳೊಂದಿಗೆ ಚರ್ಚಿಸಿ ವಿಷಯವನ್ನು ಜಿಲ್ಲಾಧಿಕಾರಿಗೆ ತಲುಪಿಸಿದ್ದಾರೆ.
ಕೆಲವು ದೇವಾಲಯಗಳಲ್ಲಿ ಕೆಳ ವರ್ಗದ ಜನರಿಗೆ ಪ್ರವೇಶ ನೀಡುತ್ತಿರಲಿಲ್ಲ. ಈ ಕೆಟ್ಟ ಪದ್ಧತಿಯನ್ನು ನಿರ್ಮೂಲನ ಮಾಡಲು, ಎಲ್ಲರಿಗೂ ದೇವಾಲಯ ಪ್ರವೇಶಕ್ಕೆ ಅನುಮತಿ ಎಂಬ ಫಲಕ ಕಡ್ಡಾಯವಾಗಿ ಹಾಕಬೇಕೆಂದು ಜಿಲ್ಲಾಘಿಕಾರಿ ಈ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT